spot_img

ದೆಹಲಿ ಚುನಾವಣಾ ಫಲಿತಾಂಶ: ಮೂರನೇ ಬಾರಿ ಆಪ್ ಸರ್ಕಾರವೇ? ಮಧ್ಯಾಹ್ನ ಸ್ಪಷ್ಟತೆ!

Date:

spot_img

ಹೊಸದಿಲ್ಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಫೆಬ್ರವರಿ 5ರಂದು ನಡೆದ ಮತದಾನದಲ್ಲಿ ಶೇ.60.54 ರಷ್ಟು ಮತ ಚಲಾಯಿಸಲಾಗಿತ್ತು. ಶನಿವಾರ (ಫೆ.08) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದ್ದು, ಮಧ್ಯಾಹ್ನಕ್ಕೆ ಸ್ಪಷ್ಟನೆ ಸಿಗಲಿದೆ.

ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕಳೆದ ಎರಡು ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್, ಈ ಬಾರಿ ಕೂಡ ಅಧಿಕಾರವನ್ನು ಉಳಿಸಿಕೊಳ್ಳಬಹುದಾ ಎಂಬ ಕುತೂಹಲ ಹೆಚ್ಚಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಸ್ಥಾನವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿವೆ.

ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವನ್ನು ಭವಿಷ್ಯ ನುಡಿಸಿದ್ದರೂ, ಅಂತಿಮ ಫಲಿತಾಂಶ ಮಾತ್ರ ಮತ ಎಣಿಕೆಯ ನಂತರವೇ ಸ್ಪಷ್ಟವಾಗಲಿದೆ. ಕಳೆದ ಬಾರಿ ಶೂನ್ಯಕ್ಕೆ ಕುಸಿದಿದ್ದ ಕಾಂಗ್ರೆಸ್ ಈ ಬಾರಿ ಮೆಚ್ಚುಗೆಯ ಫಲಿತಾಂಶ ಕಾಣಬಹುದಾ ಎಂಬುವುದರತ್ತವೂ ರಾಜಕೀಯ ವಲಯ ಗಮನ ಹರಿಸಿದೆ.

ಈ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಆತಿಶಿ, ಅಲ್ಕಾ ಲಂಬಾ, ಸೌರಭ್ ಭಾರದ್ವಾಜ್, ಹರೀಶ್ ಖುರಾನಾ, ಸೋಮನಾಥ್ ಭಾರತಿ ಸೇರಿದಂತೆ ಪ್ರಮುಖ ಮುಖಂಡರು ಕಣಕ್ಕಿಳಿದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಸರ್ವ್ ಬ್ಯಾಂಕ್ ನಾಣ್ಯ ಸಾಗಾಟ ಲಾರಿ ಪಲ್ಟಿ: ನೆಲಮಂಗಲ ಬಳಿ ₹57 ಲಕ್ಷ ನಾಣ್ಯಗಳು ಸುರಕ್ಷಿತ!

ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ (RBI) ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳನ್ನು ರಾಯಚೂರಿಗೆ ಸಾಗಿಸುತ್ತಿದ್ದ ಲಾರಿಯೊಂದು ನೆಲಮಂಗಲ ತಾಲೂಕಿನ ರಾಯರಪಾಳ್ಯ ಗೇಟ್ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದೆ.

ಧರ್ಮಸ್ಥಳ ಪ್ರಕರಣ: ತಿಮರೋಡಿ, ಸಮೀರ್, ಮಟ್ಟಣ್ಣನವರ್ ರವರ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.

ನೆಲದ ಮೇಲೆ ಕುಳಿತು ಊಟ ಮಾಡುವುದರ ಅದ್ಭುತ ಪ್ರಯೋಜನಗಳು

ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ