spot_img

ಮದುವೆಗೆ ನಿರಾಕರಿಸಿದ ಕಾರಣಕ್ಕೆ ನೇಹಾಳ ಹತ್ಯೆ: ಬುರ್ಖಾ ಧರಿಸಿ ಮನೆಗೆ ನುಗ್ಗಿ 5ನೇ ಮಹಡಿಯಿಂದ ತಳ್ಳಿ ಕೊಲೆ!

Date:

spot_img

ದೆಹಲಿ : ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಇತ್ಯರ್ಥವಾಗುವ ಮುನ್ನವೇ ದೆಹಲಿಯ ಜ್ಯೋತಿ ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿ ನೇಹಾ ಅವರನ್ನು ಅನ್ಯಕೋಮಿನ ತೌಫಿಕ್ ಎಂಬಾತ ಬುರ್ಖಾ ಧರಿಸಿ ಮನೆಗೆ ನುಗ್ಗಿ ಐದನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ.

ಉತ್ತರ ಪ್ರದೇಶದ ರಾಂಪುರ್ ಮೂಲದ ತೌಫಿಕ್, ದೆಹಲಿಯ ಮಂಡೋಲಿಯಲ್ಲಿ ಕೆಲಸ ಮಾಡುತ್ತಿದ್ದ. ಮೂರು ವರ್ಷಗಳ ಹಿಂದೆ ನೇಹಾಳ ಪರಿಚಯವಾಗಿದ್ದ ಈತನು, ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ನೇಹಾ ಈತನನ್ನು ಅಣ್ಣ ಎಂದು ಕರೆಯುತ್ತಿದ್ದು, ರಾಖಿ ಕೂಡ ಕಟ್ಟಿದ್ದಳು.

ಆದರೆ ಇತ್ತೀಚೆಗೆ ತೌಫಿಕ್, ನೇಹಾಳನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದ. ನೇಹಾ ಇದನ್ನು ನಿರಾಕರಿಸಿದ್ದಳು: “ನೀನು ನನ್ನ ಅಣ್ಣನಂತೆ, ಮದುವೆ ಸಾಧ್ಯವಿಲ್ಲ” ಎಂದಿದ್ದಳು. ಇದರಿಂದ ಕೆರಳಿದ ತೌಫಿಕ್, “ಒಪ್ಪದಿದ್ದರೆ ಹತ್ಯೆ ಮಾಡುತ್ತೇನೆ” ಎಂಬ ಬೆದರಿಕೆಯೂ ಹಾಕಿದ್ದ.

ಮೊದಲೇ ಹಿಂದೂ ಕಾರ್ಯಕರ್ತೆಯಾಗಿದ್ದ ನೇಹಾ ಇಂತಹ ಬೆದರಿಕೆಗೆಲ್ಲ ತಲೆ ಕೊಡಲು ಹೋಗಲಿಲ್ಲ.. ಬೆದರಿಕೆಗೂ ಜಗ್ಗದಿದ್ದಾಗ ತೌಫಿಕ್ ಬುರ್ಖಾ ಧರಿಸಿ ನೇಹಾಳ ಮನೆಯೊಳಗೆ ನುಗ್ಗಿದ್ದ. ಟೆರೆಸ್‌ನಲ್ಲಿ ನೀರಿನ ಟ್ಯಾಂಕ್‌ ಬಳಿಯಲ್ಲಿ ಇದ್ದ ನೇಹಾಳ ಜೊತೆ ವಾಗ್ವಾದ ನಡೆದಿದ್ದು, ಆಕೆಯನ್ನು ಐದನೇ ಮಹಡಿಯಿಂದ ಕೆಳಗೆ ತಳ್ಳಿದ. ಗಂಭೀರ ಗಾಯಗೊಂಡಿದ್ದ ನೇಹಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ, ಪರಾರಿಯಾಗಿದ್ದ ತೌಫಿಕ್ ಅನ್ನು ಯುಪಿಯ ರಾಂಪೂರಿನ ತಾಂಡಾದಿಂದ ಬಂಧಿಸಿದ್ದಾರೆ. ಈ ದಾರುಣ ಪ್ರಕರಣಕ್ಕೆ ರಾಷ್ಟ್ರದಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.