spot_img

ಉಡುಪಿಗೆ ಇಎಸ್‌ಐ ಆಸ್ಪತ್ರೆ ಬೇಡಿಕೆ: ಉಪವಾಸ ಸತ್ಯಾಗ್ರಹದೊಂದಿಗೆ ತೀವ್ರ ಹೋರಾಟ

Date:

ಉಡುಪಿ: ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದ್ದರೂ, ಅದು ಇನ್ನೂ ಉಡುಪಿಗೆ ಬರಲೇ ಇಲ್ಲ. ಇದರಿಂದ ಕಾರ್ಮಿಕರು, ಬಡವರು, ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಗಮನಿಸಿ, ಸಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಈ ಸಂಬಂಧ ಹಲವಾರು ಬಾರಿ ಪ್ರತಿಭಟನೆ, ಮನವಿ, ಒತ್ತಾಯ ಮಾಡಿದರೂ ಯಾವುದೇ ಫಲಿತಾಂಶ ದೊರಕಿಲ್ಲ. ಸರ್ಕಾರ ಮೌನ ಉಳಿಸಿಕೊಂಡಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ. ಈ ಬಾರಿಯ ಸತ್ಯಾಗ್ರಹದಲ್ಲಿ ನೂರಾರು ಜನ ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರು ಸೇರಿ ಹಕ್ಕಿಗಾಗಿ ಹೋರಾಟ ಮಾಡುವುದಾಗಿ ಜಿ.ಎ. ಕೋಟೆಯಾರ್ ಎಚ್ಚರಿಸಿದ್ದಾರೆ.

ಸತ್ಯಾಗ್ರಹದ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆಗಮಿಸಿ ಹೋರಾಟಗಾರರ ಮನವಿ ಸ್ವೀಕರಿಸಿದರು. ಈಗ ಸರ್ಕಾರ ಈ ಕುರಿತು ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾತರತೆಯಿಂದ ನಿರೀಕ್ಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಪೆರ್ವಾಜೆಯಲ್ಲಿ ಚಿರತೆಯ ಸಂಚಾರ : ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಮನವಿ

ಉಡುಪಿ ಜಿಲ್ಲೆಯ ಕಾರ್ಕಳದ ಪೆರ್ವಾಜೆ ಪ್ರದೇಶದಲ್ಲಿ ಗಂಗಾ ಪ್ಯಾರಡೈಸ್ ಬಳಿ ನಿನ್ನೆ ರಾತ್ರಿ ಸುಮಾರು 9.15ರ ಸುಮಾರಿಗೆ ಚಿರತೆಯೊಂದು ರಸ್ತೆಯಿಂದ ಕಾಡಿನತ್ತ ಹೋಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.

ಮಣಿಪಾಲ: ಹೊಸ KSRTC ಬಸ್‌ಗಳು ಬರಲಿವೆ; ಸಾರಿಗೆ ಸೌಲಭ್ಯ ಸುಧಾರಿಸಲು ಭರವಸೆ

ರಾಜ್ಯ ಸರಕಾರದಿಂದ ಮಂಗಳೂರು ವಿಭಾಗಕ್ಕೆ 100 ಹೊಸ ಬಸ್ಗಳನ್ನು ಶೀಘ್ರವೇ ನೀಡಲಾಗುವುದು. ಇವುಗಳಲ್ಲಿ 40 ಬಸ್ಗಳು ಉಡುಪಿ ಜಿಲ್ಲೆಗೆ ಬರಲಿವೆ.

ಉಡುಪಿ: ಬಾಂಗ್ಲಾದೇಶದ ಅಕ್ರಮ ವಲಸಿಗರ ಮೇಲೆ ಕಟ್ಟುನಿಟ್ಟಾದ ನಿಗಾ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಮೇಲೆ ಕಟ್ಟುನಿಟ್ಟಾದ ನಿಗಾ ವ್ಯವಸ್ಥೆ ಜಾರಿಗೆ ಬಂದಿದೆ

ಬಾದಾಮಿ ಸಿಪ್ಪೆಯ ಅದ್ಭುತ ಪ್ರಯೋಜನಗಳು – ನೀವು ತಿಳಿಯದ ಸತ್ಯ!

ಬಾದಾಮಿ ಒಂದು ಸೂಪರ್ ಫುಡ್ ಎಂದು ಪರಿಗಣಿಸಲ್ಪಟ್ಟಿದೆ. ಹೃದಯ ಆರೋಗ್ಯ, ಮೆದುಳಿನ ಕಾರ್ಯಕ್ಷಮತೆ, ಮತ್ತು ಚರ್ಮದ ಹೊಳಪನ್ನು ಹೆಚ್ಚಿಸುವಲ್ಲಿ ಇದರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.