
ಹಿರಿಯಡ್ಕ: ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದ ಆಶ್ರಯದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ ಜರುಗಲಿದೆ.
ಕಾರ್ಯಕ್ರಮವು ಬೆಳಿಗ್ಗೆ 7:30 ರಿಂದ ಆರಂಭವಾಗಲಿದ್ದು, ಮೊದಲಿಗೆ ಗಣಹೋಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ಬೆಳಿಗ್ಗೆ 9:30 ಕ್ಕೆ ಲಘು ಉಪಹಾರ ವ್ಯವಸ್ಥೆ ಇರುವುದಲ್ಲದೆ, ಬೆಳಿಗ್ಗೆ 10:30ರಿಂದ ಸಮಾಜದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಬೆಳಿಗ್ಗೆ 11:00ರಿಂದ ಮುಖ್ಯ ಕಾರ್ಯಕ್ರಮವಾದ ವಿದ್ಯಾರ್ಥಿ ವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ SSLC ಹಾಗೂ PUC ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವ ಉಪಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನ ಹಾಗೂ ಪುಸ್ತಕ ವಿತರಣೆ ಮಾಡಲಾಗುತ್ತದೆ.
ಈ ಸಮಾರಂಭದ ಮುಖ್ಯ ಉದ್ದೇಶ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ವಿದ್ಯಾಭ್ಯಾಸದ ಪ್ರಾರಂಭದಲ್ಲಿಯೇ ಶ್ರದ್ಧೆ ಬೆಳೆಸುವುದು. ಸಮಾಜದ ಪ್ರತಿಯೊಬ್ಬ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಸಮಾರಂಭ ಆಯೋಜಕರು:
ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕ