spot_img

ಧರ್ಮಸ್ಥಳದಲ್ಲಿ ಸೆ. 14 ರಿಂದ 21 ರವರೆಗೆ 27ನೇ ವರ್ಷದ ಭಜನಾ ಕಮ್ಮಟೋತ್ಸವ!

Date:

spot_img

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ 27ನೇ ವರ್ಷದ ಭಜನಾ ಕಮ್ಮಟೋತ್ಸವವನ್ನು ಸೆಪ್ಟೆಂಬರ್ 14 ರಿಂದ 21 ರವರೆಗೆ ಆಯೋಜಿಸಲಾಗಿದೆ. ಈ ವಾರ್ಷಿಕ ಕಾರ್ಯಕ್ರಮವು ಭಜನೆಯಲ್ಲಿ ರಾಗ, ತಾಳ, ಲಯಗಳ ಬಗ್ಗೆ ತರಬೇತಿ ನೀಡುವ ಗುರಿ ಹೊಂದಿದೆ.

ಸೆಪ್ಟೆಂಬರ್ 14 ರಂದು ಆರಂಭಗೊಳ್ಳುವ ಕಮ್ಮಟವು ಸೆಪ್ಟೆಂಬರ್ 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. 18 ರಿಂದ 45 ವರ್ಷ ವಯೋಮಾನದವರಿಗೆ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆದರೆ, ಈ ಹಿಂದೆ ಧರ್ಮಸ್ಥಳದ ಭಜನಾ ಕಮ್ಮಟದಲ್ಲಿ ಭಾಗವಹಿಸದವರು ಮಾತ್ರ ಅರ್ಜಿ ಸಲ್ಲಿಸಬಹುದು.

ಒಂದು ಭಜನಾ ಮಂಡಳಿಯಿಂದ ಗರಿಷ್ಠ ಇಬ್ಬರಿಗೆ ಅವಕಾಶವಿದ್ದು, ಭಾಗವಹಿಸುವವರು ತಾವು ಕಲಿತು ಇತರರಿಗೆ ಕಲಿಸಿಕೊಡುವ ಸಾಮರ್ಥ್ಯ ಹೊಂದಿರಬೇಕು. ಆಸಕ್ತರು ಆಗಸ್ಟ್ 31ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಬಹುದು ಎಂದು ಭಜನಾ ಕಮ್ಮಟದ ಸಂಚಾಲಕ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ. ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಾರ್ಕಳದಲ್ಲಿ ಅಲ್ಪ ಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ!

ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ನಾಳೆ (ಮಂಗಳವಾರ, ಜುಲೈ 8, 2025) ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಬೇವಿನ ಎಲೆಯ ಅದ್ಭುತ ಗುಣಗಳು: ಮೂತ್ರಪಿಂಡದ ಕಲ್ಲುಗಳಿಂದ ಮೊಡವೆ ನಿವಾರಣೆವರೆಗೆ!

ಪ್ರೋಟೀನ್, ವಿಟಮಿನ್-ಸಿ, ಕ್ಯಾರೋಟಿನ್ ಮತ್ತು ಆಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿರುವ ಬೇವಿನ ಎಲೆಗಳು ಹಲವು ರೋಗಗಳಿಗೆ ರಾಮಬಾಣವಾಗಿವೆ.

ಮಣಿಪಾಲದಲ್ಲಿ ದುರಂತ: ಮೂರ್ಛೆ ರೋಗದಿಂದ ಬೇಸತ್ತು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಮೂರ್ಛೆ ರೋಗದಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ನಡೆದಿದೆ.

ಜಲಪಾತದ ತುದಿಯಲ್ಲಿ ಪ್ರಪೋಸ್ ಮಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ಯುವಕ : ವಿಡಿಯೋ ವೈರಲ್!

ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.