ಧರ್ಮಸ್ಥಳ ಬುರುಡೆ ಕೇಸ್ ಸೂತ್ರಧಾರ ಬಂಧನ: ನಾವು ನ್ಯಾಯದ ಪರ, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

Date:

spot_img
dks

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ” ಎಂದು ಅವರು ಸ್ಪಷ್ಟಪಡಿಸಿದರು. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದು ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “‘ಷಡ್ಯಂತ್ರ’ದ ವಿಚಾರವನ್ನು ನಾನೇ ಮೊದಲು ಪ್ರಸ್ತಾಪಿಸಿದ ನಂತರ ಬಿಜೆಪಿಯವರು ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಅಲ್ಲಿಯವರೆಗೆ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದರು” ಎಂದು ಆರೋಪಿಸಿದರು.

ಧರ್ಮಸ್ಥಳದ ಕುಟುಂಬದ ಸದಸ್ಯರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ಎಸ್ ಐಟಿ ರಚನೆ ಮಾಡಿದ್ದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಮತ್ತು ಸಿಎಲ್ ಪಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಅನನ್ಯಾ ಭಟ್ ನನ್ನ ಮಗಳೇ ಅಲ್ಲ ಎಂದು ಸುಜಾತ ಭಟ್ ನೀಡಿದ ಹೊಸ ಹೇಳಿಕೆ ಬಗ್ಗೆ ಕೇಳಿದಾಗ, ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಇತರೆ ರಾಜಕೀಯ ಬೆಳವಣಿಗೆಗಳು

  • ಸ್ಥಳೀಯ ಸಂಸ್ಥೆಗಳ ಚುನಾವಣೆ: ನ್ಯಾಯಾಲಯವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಹೇಳಿರುವುದರಿಂದ ಅದರ ಸಿದ್ಧತೆಯನ್ನು ಪಕ್ಷವು ನಡೆಸುತ್ತಿದೆ. ಚುನಾವಣಾ ಜವಾಬ್ದಾರಿ ಹಂಚಿಕೆ ಕುರಿತು ರಣದೀಪ್ ಸುರ್ಜೇವಾಲ ಅವರ ಜೊತೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.
  • ಬಿಹಾರ ಭೇಟಿ: ಬಿಹಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಜನಾಧಿಕಾರ ಯಾತ್ರೆ’ಯಲ್ಲಿ ಭಾಗವಹಿಸಲು ತಾವು ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿದ್ದು, ಅವರು ಇನ್ನೊಂದು ದಿನ ತೆರಳಲಿದ್ದಾರೆ ಎಂದರು.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.