
ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಗ್ರಾಮದ ‘ಬುರುಡೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಿದೆ.
ತನಿಖೆ ಅಪೂರ್ಣ – ನ್ಯಾಯಾಲಯದ ಆಕ್ಷೇಪ: ಈ ಹಿಂದೆ ಎಸ್ಐಟಿ ತಂಡವು ನ್ಯಾಯಾಲಯಕ್ಕೆ 3923 ಪುಟಗಳ ಸುದೀರ್ಘ ವರದಿಯನ್ನು ಸಲ್ಲಿಸಿತ್ತು. ಈ ವರದಿಯಲ್ಲಿ ಚಿನ್ನಯ್ಯ ಸೇರಿದಂತೆ 6 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 215 ರ ಅಡಿಯಲ್ಲಿ ಸುಳ್ಳು ಸಾಕ್ಷ್ಯ ನುಡಿದ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಎಸ್ಐಟಿ ಪರ ಅಭಿಯೋಜಕರು ಮನವಿ ಮಾಡಿದ್ದರು. ಆದರೆ, ಈ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್. ಅವರು, ಸದ್ಯ ಸಲ್ಲಿಕೆಯಾಗಿರುವುದು ಕೇವಲ ಪ್ರಾಥಮಿಕ ವರದಿಯಾಗಿದ್ದು, ತನಿಖೆ ಇನ್ನೂ ಬಾಕಿ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ, ಪೂರ್ಣ ಪ್ರಮಾಣದ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಿದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.
ಕ್ಷೇತ್ರದ ಪರ ವಾದ – ಸಂತ್ರಸ್ತ ಸ್ಥಾನಮಾನಕ್ಕೆ ಮನವಿ: ಮತ್ತೊಂದೆಡೆ, ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ಈ ಪ್ರಕರಣದ ಮೂಲಕ ಉದ್ದೇಶಪೂರ್ವಕವಾಗಿ ಕಳಂಕ ತರಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಎಸ್ಐಟಿ ವರದಿಯಲ್ಲಿ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ, ಧರ್ಮಸ್ಥಳ ಕ್ಷೇತ್ರವನ್ನೇ ಈ ಪ್ರಕರಣದಲ್ಲಿ ‘ಸಂತೃಸ್ತ’ (Victim) ಎಂದು ಪರಿಗಣಿಸಬೇಕೆಂದು ಕ್ಷೇತ್ರದ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದ ಘನತೆಗೆ ಧಕ್ಕೆ ತಂದಿರುವ ವಿಚಾರದಲ್ಲಿ ನಮಗೂ ವಾದ ಮಂಡಿಸಲು ಅವಕಾಶ ನೀಡಬೇಕೆಂದು ವಕೀಲ ಕೇಶವ ಗೌಡ ಬೆಳಾಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಜನವರಿ 14ಕ್ಕೆ ನಿಗದಿಪಡಿಸಿದೆ.
ಮುಂದಿನ ಹಂತ: ಎಸ್ಐಟಿ ಅಧಿಕಾರಿಗಳು ಈಗ ನ್ಯಾಯಾಲಯದ ಸೂಚನೆಯಂತೆ ಅಂತಿಮ ವರದಿಯನ್ನು ಸಿದ್ಧಪಡಿಸಬೇಕಿದೆ. ಜನವರಿ 23ರಂದು ಎಸ್ಐಟಿ ತನ್ನ ಪೂರ್ಣ ವರದಿಯನ್ನು ಸಲ್ಲಿಸುತ್ತದೆಯೇ ಅಥವಾ ಹೆಚ್ಚಿನ ಸಮಯಾವಕಾಶ ಕೋರುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ವಿಚಾರಣೆಯ ಸಂದರ್ಭದಲ್ಲಿ ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಗ್ರಾಮದ ‘ಬುರುಡೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಿದೆ.
ತನಿಖೆ ಅಪೂರ್ಣ – ನ್ಯಾಯಾಲಯದ ಆಕ್ಷೇಪ: ಈ ಹಿಂದೆ ಎಸ್ಐಟಿ ತಂಡವು ನ್ಯಾಯಾಲಯಕ್ಕೆ 3923 ಪುಟಗಳ ಸುದೀರ್ಘ ವರದಿಯನ್ನು ಸಲ್ಲಿಸಿತ್ತು. ಈ ವರದಿಯಲ್ಲಿ ಚಿನ್ನಯ್ಯ ಸೇರಿದಂತೆ 6 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 215 ರ ಅಡಿಯಲ್ಲಿ ಸುಳ್ಳು ಸಾಕ್ಷ್ಯ ನುಡಿದ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಎಸ್ಐಟಿ ಪರ ಅಭಿಯೋಜಕರು ಮನವಿ ಮಾಡಿದ್ದರು. ಆದರೆ, ಈ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್. ಅವರು, ಸದ್ಯ ಸಲ್ಲಿಕೆಯಾಗಿರುವುದು ಕೇವಲ ಪ್ರಾಥಮಿಕ ವರದಿಯಾಗಿದ್ದು, ತನಿಖೆ ಇನ್ನೂ ಬಾಕಿ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ, ಪೂರ್ಣ ಪ್ರಮಾಣದ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಿದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.
ಕ್ಷೇತ್ರದ ಪರ ವಾದ – ಸಂತ್ರಸ್ತ ಸ್ಥಾನಮಾನಕ್ಕೆ ಮನವಿ: ಮತ್ತೊಂದೆಡೆ, ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ಈ ಪ್ರಕರಣದ ಮೂಲಕ ಉದ್ದೇಶಪೂರ್ವಕವಾಗಿ ಕಳಂಕ ತರಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಎಸ್ಐಟಿ ವರದಿಯಲ್ಲಿ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ, ಧರ್ಮಸ್ಥಳ ಕ್ಷೇತ್ರವನ್ನೇ ಈ ಪ್ರಕರಣದಲ್ಲಿ ‘ಸಂತೃಸ್ತ’ (Victim) ಎಂದು ಪರಿಗಣಿಸಬೇಕೆಂದು ಕ್ಷೇತ್ರದ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದ ಘನತೆಗೆ ಧಕ್ಕೆ ತಂದಿರುವ ವಿಚಾರದಲ್ಲಿ ನಮಗೂ ವಾದ ಮಂಡಿಸಲು ಅವಕಾಶ ನೀಡಬೇಕೆಂದು ವಕೀಲ ಕೇಶವ ಗೌಡ ಬೆಳಾಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಜನವರಿ 14ಕ್ಕೆ ನಿಗದಿಪಡಿಸಿದೆ.
ಮುಂದಿನ ಹಂತ: ಎಸ್ಐಟಿ ಅಧಿಕಾರಿಗಳು ಈಗ ನ್ಯಾಯಾಲಯದ ಸೂಚನೆಯಂತೆ ಅಂತಿಮ ವರದಿಯನ್ನು ಸಿದ್ಧಪಡಿಸಬೇಕಿದೆ. ಜನವರಿ 23ರಂದು ಎಸ್ಐಟಿ ತನ್ನ ಪೂರ್ಣ ವರದಿಯನ್ನು ಸಲ್ಲಿಸುತ್ತದೆಯೇ ಅಥವಾ ಹೆಚ್ಚಿನ ಸಮಯಾವಕಾಶ ಕೋರುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ವಿಚಾರಣೆಯ ಸಂದರ್ಭದಲ್ಲಿ ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




































