spot_img

ಧರ್ಮಸ್ಥಳ ಪ್ರಕರಣ : ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ!

Date:

spot_img
court

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕಾಜ್ಞೆ ಕೋರಿ ಸಲ್ಲಿಸಲಾದ ದಾವೆ ವಿಚಾರಣೆಯಿಂದ ನ್ಯಾಯಾಧೀಶ ವಿಜಯ್‌ ಕುಮಾರ್‌ ರೈ ಅವರು ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ತಾವು ಮಂಗಳೂರಿನ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವುದರಿಂದ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ವಿಚಾರಣೆ ವರ್ಗಾವಣೆಗೆ ಮನವಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ಬಂಧ ಕೋರಿ ಅಸಲು ದಾವೆಯನ್ನು ಸಲ್ಲಿಸಲಾಗಿತ್ತು. ಬೆಂಗಳೂರಿನ 10ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ವಿಜಯ್‌ ಕುಮಾರ್‌ ರೈ ಅವರು ಈ ಪ್ರಕರಣವನ್ನು ವಿಚಾರಣೆ ಮಾಡುತ್ತಿದ್ದರು. ಆದರೆ, ವೈಯಕ್ತಿಕ ಕಾರಣಗಳಿಗಾಗಿ, ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್‌ ನ್ಯಾಯಾಧೀಶರಿಗೆ ಮೆಮೊ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಏಕಪಕ್ಷೀಯ ತಡೆಯಾಜ್ಞೆ ಮತ್ತು ವಿವಾದ

ಈ ಹಿಂದೆ ಇದೇ ನ್ಯಾಯಾಧೀಶರು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ನಿರ್ಬಂಧಕಾಜ್ಞೆಯನ್ನು ಹೊರಡಿಸಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಈ ಆದೇಶವನ್ನು ಪತ್ರಕರ್ತ ನವೀನ್‌ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್‌ ಕಾಟಿಪಳ್ಳ ಮತ್ತು ಬೈರಪ್ಪ ಹರೀಶ್‌ ಕುಮಾರ್‌ ಪ್ರಶ್ನಿಸಿದ್ದರು. ಈಗ ನ್ಯಾಯಾಧೀಶರು ಸ್ವತಃ ವಿಚಾರಣೆಯಿಂದ ಹಿಂದೆ ಸರಿದಿರುವುದರಿಂದ, ಈ ಪ್ರಕರಣವು ಹೊಸ ನ್ಯಾಯಾಲಯದ ವ್ಯಾಪ್ತಿಗೆ ಹೋಗಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಮುಷ್ಕರ: ಗ್ರಾಮೀಣ ಭಾಗದಲ್ಲಿ ಎಂದಿನಂತೆ ಬಸ್ ಸಂಚಾರ

ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಮುಷ್ಕರ ನಡೆಸುತ್ತಿದ್ದರೂ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಬಸ್ ಸಂಚಾರ ಎಂದಿನಂತೆ ಸುಗಮವಾಗಿದೆ.

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು 38 ನೇ ವಿದ್ಯಾರ್ಥಿ ಪರಿಷತ್ ಉದ್ಘಾಟನೆ.

ದಿನಾಂಕ 05-08-2025 ರ ಮಂಗಳವಾರದಂದು ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ನಿಟ್ಟೆ ಇದರ 38ನೇ ವಿದ್ಯಾರ್ಥಿ ಪರಿಷತ್ ಅನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಸಹಯೋಗಗಳ ನಿರ್ದೇಶಕರಾದ ಪ್ರೋ. ಹರೀಕೃಷ್ಣ ಭಟ್ ಉದ್ಘಾಟಿಸಿದರು.

ಬಲ್ಲಾಡಿ ಮಠದಲ್ಲಿ ಲಕ್ಷ ತುಳಸಿ ಅರ್ಚನೆ, ಧಾರ್ಮಿಕ ಪ್ರವಚನ

ವೇದಾಂತ ವಿದ್ವಾನ್ ಕಾರ್ಕಳ ಮದ್ವೇಶ ಆಚಾರ್ಯ ಅವರು ಮುದ್ರಾಡಿ ಗ್ರಾಮದ ಬಲ್ಲಾಡಿ ಮಠದ ಶ್ರೀ ವಿಠ್ಠಲ ದೇವರ ಲಕ್ಷ ತುಳಸಿ ಅರ್ಚನೆಯಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು.

ತುಮಕೂರು: ಒಟಿಪಿ ಹೇಳದಿದ್ದರೂ ನಿವೃತ್ತ ನೌಕರನ ಖಾತೆಯಿಂದ ₹17 ಲಕ್ಷ ಮಾಯ; ಹೊಸ ಮಾದರಿಯ ಸೈಬರ್‌ ವಂಚನೆ!

ತುಮಕೂರಿನಲ್ಲಿ ನಿವೃತ್ತ ರೇಷ್ಮೆ ಇಲಾಖೆ ನೌಕರರೊಬ್ಬರು ಇದಕ್ಕೆ ಬಲಿಯಾಗಿದ್ದಾರೆ.