ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

Date:

spot_img

ಬೆಳ್ತಂಗಡಿ: ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ಸತ್ಯ ಶೋಧನೆಗಾಗಿ SIT ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಸಿಬ್ಬಂದಿ ಜುಲೈ 11.30ರಿಂದ 1.55ರವರೆಗೆ ಪರಿಶೀಲನೆ ನಡೆಸಿದರೂ ಫಲಿತಾಂಶ ಶೂನ್ಯವಾಗಿದೆ. ಇದೀಗ 12ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮುಂದುವರೆಯಲಿದೆ.

6ನೇ ಸ್ಥಳದಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ SITಗೆ ಹಸ್ತಾಂತರ

ಈ ನಡುವೆ, ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ನಡೆದಿದೆ. ಜುಲೈ 31ರಂದು ದೂರುದಾರ ಗುರುತು ಮಾಡಿದ್ದ 6ನೇ ಜಾಗದಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಗಸ್ಟ್ 1ರಂದು SIT ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಈಗ, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸರು ಅಧಿಕೃತವಾಗಿ SIT ತಂಡಕ್ಕೆ ಹಸ್ತಾಂತರ ಮಾಡಲಿದ್ದಾರೆ. ಈಗಾಗಲೇ ಪತ್ತೆಯಾದ ಅಸ್ಥಿಪಂಜರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮುಂದಿನ ತನಿಖೆಗಾಗಿ SIT ತಂಡ ಅಧಿಕೃತವಾಗಿ ಕಾರ್ಯಾಚರಣೆ ನಡೆಸಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ