ಧರ್ಮಸ್ಥಳ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್‌ ಜಾರಿ

Date:

spot_img

ಮಂಗಳೂರು: ಧರ್ಮಸ್ಥಳಕ್ಕೆ ತೆರಳಿದ್ದ ತನ್ನ ಮಗಳು ನಾಪತ್ತೆಯಾಗಿದ್ದಳು ಎಂದು ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ್ದ ಸುಜಾತ ಭಟ್ ಅವರಿಗೆ ಇದೀಗ ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ನಕಲಿ ಫೋಟೋ ಬಳಕೆಯ ಆರೋಪ

ಈ ಹಿಂದೆ, ಸುಜಾತ ಭಟ್ ಅವರು ತನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಆಕೆಯ ಫೋಟೋವನ್ನು ಬಿಡುಗಡೆ ಮಾಡಿದ್ದರು. ಆದರೆ ಆ ಫೋಟೋ ಬೇರೆ ಯುವತಿಯೊಬ್ಬರದು ಎಂದು ಆರೋಪಿಸಿ ಆಕೆಯ ಸಹೋದರ ದೂರು ನೀಡಿದ್ದರು. ಈ ಘಟನೆಯು ಪ್ರಕರಣಕ್ಕೆ ಹೊಸ ತಿರುವು ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡವು ಈ ಕುರಿತು ಗಂಭೀರ ತನಿಖೆ ಆರಂಭಿಸಿದೆ.

ಬೆಂಗಳೂರಿನಲ್ಲಿ ನೋಟಿಸ್ ಜಾರಿ

ಪ್ರಕರಣದ ಸತ್ಯಾಂಶ ಬಯಲಿಗೆಳೆಯಲು ಮುಂದಾಗಿರುವ ಎಸ್‌ಐಟಿ, ಸುಜಾತ ಭಟ್ ಅವರಿಗೆ ಬೆಳ್ತಂಗಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ. ಬೆಳ್ತಂಗಡಿ ಕಚೇರಿಯ ಸಿಬ್ಬಂದಿ ಬೆಂಗಳೂರಿಗೆ ತೆರಳಿ ನೇರವಾಗಿ ಸುಜಾತ ಭಟ್ ಅವರಿಗೆ ನೋಟಿಸ್‌ ನೀಡಿದ್ದಾರೆ. ನೋಟಿಸ್ ಸ್ವೀಕರಿಸಿರುವ ಸುಜಾತ ಭಟ್, ಶೀಘ್ರದಲ್ಲೇ ವಿಚಾರಣೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

ಈಗಾಗಲೇ, ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗ, ಬೆಂಗಳೂರು ಮತ್ತು ಉಡುಪಿ ಸೇರಿದಂತೆ ವಿವಿಧ ಕಡೆಗಳಲ್ಲಿ ಅನನ್ಯಾ ಭಟ್ ಅಸ್ತಿತ್ವದ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಈ ಮಾಹಿತಿಗಳನ್ನು ಆಧರಿಸಿ ಸುಜಾತ ಭಟ್ ಅವರನ್ನು ಪ್ರಶ್ನಿಸುವ ಸಾಧ್ಯತೆ ಇದ್ದು, ವಿಚಾರಣೆ ಬಳಿಕ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ