ಧರ್ಮಸ್ಥಳ ಪ್ರಕರಣ; ಎಂ.ಡಿ. ಸಮೀರ್, ಮುನಾಫ್, ಅಭಿಷೇಕ್ ಸೇರಿ ಯೂಟ್ಯೂಬರ್‌ಗಳಿಗೆ ಎಸ್‌ಐಟಿ ನೋಟಿಸ್

Date:

spot_img
sameer

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾದ ತಲೆಬುರುಡೆ ಪ್ರಕರಣ ಸೇರಿದಂತೆ ಹಲವು ವಿವಾದಾತ್ಮಕ ಆರೋಪಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್.ಐ.ಟಿ.) ತನಿಖೆಯನ್ನು ತೀವ್ರಗೊಳಿಸಿದೆ. ಈ ಸಂಬಂಧ, ಪ್ರಕರಣದ ಕುರಿತು ವಿವಿಧ ಮಾಹಿತಿಗಳನ್ನು ಹಂಚಿಕೊಂಡಿರುವ ಕೆಲವು ಯೂಟ್ಯೂಬರ್‌ಗಳಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.

ಎಂ.ಡಿ. ಸಮೀರ್, ಮುನಾಫ್ ಮತ್ತು ಅಭಿಷೇಕ್ ಸೇರಿದಂತೆ ಪ್ರಮುಖ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಶುಕ್ರವಾರ (ನಿನ್ನೆ) ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶನ ನೀಡಲಾಗಿತ್ತು. ತನಿಖೆಯ ಪ್ರಗತಿಗೆ ಸಂಬಂಧಿಸಿದಂತೆ ಈ ಯೂಟ್ಯೂಬರ್‌ಗಳಿಂದ ಕೆಲವು ಪ್ರಮುಖ ಮಾಹಿತಿಗಳನ್ನು ಪಡೆದಿರುವ ಸಾಧ್ಯತೆ ಇದೆ.

ತಿಮರೋಡಿ ಜಾಮೀನು ಅರ್ಜಿ ನಾಳೆ ವಿಚಾರಣೆ:

ಇದೇ ಪ್ರಕರಣಗಳ ಕುರಿತು ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ತಿಮರೋಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಮಂಗಳೂರಿನ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಅಕ್ಟೋಬರ್ 4 (ಇಂದು) ರಂದು ಅಂತಿಮ ನಿರ್ಧಾರ ಪ್ರಕಟಿಸಲಿದೆ. ತಿಮರೋಡಿಯವರಿಗೆ ಜಾಮೀನು ಸಿಗಲಿದೆಯೇ ಎಂಬುದರ ಕುರಿತು ಕುತೂಹಲ ಮೂಡಿದೆ.

ಸದ್ಯ ಎಸ್‌ಐಟಿ ಅಧಿಕಾರಿಗಳು ಇತ್ತ ಯೂಟ್ಯೂಬರ್‌ಗಳ ವಿಚಾರಣೆ ಮತ್ತು ಅತ್ತ ನ್ಯಾಯಾಲಯದ ನಿರ್ಧಾರದ ಮೇಲೆ ಕಣ್ಣಿಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.