
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ, ಕರ್ನಾಟಕ ಪಬ್ಲಿಕ್ ಸ್ಕೂಲ್, ಹೊಸ್ಮಾರು ಶಾಲೆಯ ಆವರಣಕ್ಕೆ ಕಾಂಪೌಂಡ್ ನಿರ್ಮಿಸಲು ರೂ. 30,000 ಮೊತ್ತವನ್ನು ಮಂಜೂರು ಮಾಡಲಾಗಿದೆ.
ಈ ಮಂಜೂರಾತಿ ಪತ್ರವನ್ನು ಕಾರ್ಕಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಕುಸುಮ ಮತ್ತು ಎಸ್ಡಿಎಂಸಿ ಅಧ್ಯಕ್ಷರಾದ ಜಗದೀಶ್ ಆರ್. ಅಂಚನ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರಾದ ಗಿರೀಶ್ ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಈ ನೆರವು ಶಾಲೆಯ ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ.



































