ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

Date:

spot_img

ಶಿವಮೊಗ್ಗ: ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಆರೋಪಿ ಚಿನ್ನಯ್ಯ ತಾನೇ ಸುಮಾರು 10ಕ್ಕೂ ಹೆಚ್ಚು ಶವಗಳನ್ನು ವಿವಿಧೆಡೆ ಹೂತಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಈ ಹಿನ್ನೆಲೆಯಲ್ಲಿ, ಎಸ್ಐಟಿ ತಂಡವು ಚಿನ್ನಯ್ಯನಿಂದ ಮತ್ತಷ್ಟು ಮಾಹಿತಿ ಕಲೆಹಾಕಲು ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಸೊಗಾನೆಯ ಕೇಂದ್ರ ಕಾರಾಗೃಹಕ್ಕೆ ಶುಕ್ರವಾರ (ಅಕ್ಟೋಬರ್ 17) ಭೇಟಿ ನೀಡಿದೆ.

ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದಿರುವ ಎಸ್ಪಿ ಸೈಮನ್ ನೇತೃತ್ವದ ವಿಶೇಷ ತಂಡವು, ಚಿನ್ನಯ್ಯನನ್ನು ಕೂಲಂಕುಷವಾಗಿ ವಿಚಾರಣೆ ನಡೆಸುತ್ತಿದೆ. ಕೇವಲ ಒಂದು ಶವ ಹೂತಿಟ್ಟಿರುವ ಆರೋಪದಿಂದ, ಇದೀಗ 10ಕ್ಕಿಂತ ಹೆಚ್ಚು ಶವಗಳನ್ನು ಹೂತಿಟ್ಟಿರುವ ಆತಂಕಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ, ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗದಲ್ಲಿ 2 ದಿನಗಳ ಕಾಲ ಮೊಕ್ಕಾಂ ಹೂಡುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಆರೋಪಿಯ ಹೇಳಿಕೆಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪ್ರಯತ್ನಿಸಲಿದ್ದಾರೆ. ಈ ವಿಚಾರಣೆ ಬಳಿಕ ಪ್ರಕರಣದ ತನಿಖೆ ಮಹತ್ವದ ಹಂತಕ್ಕೆ ತಲುಪುವ ಸಾಧ್ಯತೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ