spot_img

ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ ನಿರ್ದೇಶಕ ನಾಗಶೇಖರ್

Date:

ಬೆಂಗಳೂರು : ‘ಸಂಜು ವೆಡ್ಸ್ ಗೀತಾ 2’ ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಈ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಕನ್ನಡ ಚಲನಚಿತ್ರ ಕಲಾವಿದರ ಸಂಘ ಹಾಗೂ ಫಿಲ್ಮ್ ಚೇಂಬರ್‌ ಬಳಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಪ್ರಚಾರದಲ್ಲಿ ಭಾಗವಹಿಸದ ಕಾರಣಕ್ಕೆ ಆಕ್ರೋಶ
ಸಿನಿಮಾ ಬಿಡುಗಡೆಗೂ ಮುನ್ನ ಹಾಗೂ ಬಳಿಕ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ, ಚಿತ್ರತಂಡಕ್ಕೆ ಯಾವುದೇ ಬೆಂಬಲ ನೀಡದ ನಟಿಯ ನಡೆ ಚಿತ್ರತಂಡವನ್ನು ಅಸಮಾಧಾನಕ್ಕೆ ಗುರಿಮಾಡಿದೆ.ಸಿನಿಮಾ ಪ್ರಚಾರದಲ್ಲಿ ನಾಯಕಿಯ ಪಾತ್ರ ಮುಖ್ಯವಾದದ್ದು, ನಟಿಯ ನಿರ್ಲಕ್ಷ್ಯದಿಂದಾಗಿ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಎಂಬ ಆರೋಪವನ್ನು ನಿರ್ದೇಶಕರು ಮಾಡಿದ್ದಾರೆ.

“ಈ ಹಿಂದೆ ರಮ್ಯಾ ಹಾಗೂ ತಮನ್ನಾ ಜೊತೆ ಕೆಲಸ ಮಾಡಿದ್ದೇನೆ. ಆದರೆ ಈ ರೀತಿ ಯಾವ ನಟಿಯೂ ನಡೆದುಕೊಂಡಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವರು ಈ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ. ನಾವು ಅವರಿಗೆ ಸರಿಯಾದ ಸಂಭಾವನೆಯನ್ನು ಕೊಟ್ಟಿದ್ದೇವೆ. ರಚಿತಾ ರಾಮ್ ಅವರ ವರ್ತನೆ ತುಂಬಾ ನಿರಾಶೆ ಉಂಟುಮಾಡಿದೆ” ಎಂದು ನಾಗಶೇಖರ್ ವಿಷಾದ ವ್ಯಕ್ತಪಡಿಸಿದ್ದಾರೆ. ಚಿತ್ರ ನಿರ್ಮಾಪಕ ಛಲವಾದಿ ಕುಮಾರ್ ಹಾಗೂ ನಟ ಶ್ರೀನಗರ ಕಿಟ್ಟಿ ಸಹ ಈ ದೂರಿಗೆ ಸಹಿ ಹಾಕಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಜೋಡಿಯಲ್ಲಿ ಮೂಡಿಬಂದಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಅತಿವೇಗದಿಂದ ಬಸ್ ಚಲಾಯಿಸಿದ ಚಾಲಕನ ಬಂಧನ – ಬಸ್ಸು ವಶಕ್ಕೆ

ಉಡುಪಿ ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಖಾಸಗಿ ಬಸ್ಸು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕಾಲ್ಬೆರಳುಗಳ ನಡುವೆ ಉಂಟಾಗುವ ತುರಿಕೆ ಮತ್ತು ಅಲರ್ಜಿ ನಿವಾರಣೆಗೆ ಪ್ರಯೋಜನಕಾರಿ ಮನೆಮದ್ದುಗಳು !

ಮಳೆಗಾಲ ಆರಂಭವಾದರೆ ಅಲರ್ಜಿ, ತುರಿಕೆ ಮತ್ತು ಫಂಗಲ್ ಸೋಂಕು ಸಾಮಾನ್ಯವಾಗುತ್ತದೆ. ವಿಶೇಷವಾಗಿ ಕಾಲ್ಬೆರಳುಗಳ ಮಧ್ಯೆ ಉಂಟಾಗುವ ತುರಿಕೆ ಜನರಿಗೆ ತೀವ್ರ ಕಿರಿಕಿರಿಯನ್ನು ಉಂಟುಮಾಡುತ್ತದೆ.

ಇಸ್ರೇಲ್‌ಗೆ ಡೇಟಾ ಸೋರಿಕೆ ಶಂಕೆ: ಜನರಿಗೆ ವಾಟ್ಸಾಪ್ ಅನ್‌ಇನ್‌ಸ್ಟಾಲ್ ಮಾಡಲು ಸೂಚಿಸಿದ ಇರಾನ್

ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಇಸ್ರೇಲ್‌ಗೆ ಸೋರಿಸುತ್ತಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಇರಾನಿನ ಸರ್ಕಾರಿ ದೂರದರ್ಶನವು ದೇಶದ ನಾಗರಿಕರಿಗೆ ವಾಟ್ಸಾಪ್ ಅನ್ನು ತಮ್ಮ ಮೊಬೈಲ್‌ಗಳಿಂದ ಡಿಲೀಟ್ ಮಾಡಿಕೊಳ್ಳುವಂತೆ ಮಂಗಳವಾರ ಎಚ್ಚರಿಕೆ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ಗಾಂಜಾ, ಮೊಬೈಲ್, ನಗದು ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಅಕ್ರಮ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಿಗ್ಗೆ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿದೆ.