spot_img

ಶಿಸ್ತು ಮತ್ತು ಕ್ರಮಭರಿತ ಅಧ್ಯಯನದಿಂದ ವಿದ್ಯಾರ್ಥಿಗಳ ಕಲಿಕೆ ಸಾಧ್ಯ : ಪ್ರೊ. ಬಿ ಪದ್ಮನಾಭ ಗೌಡ

Date:

ಕಾರ್ಕಳ : “ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಉತ್ತಮ ಗುರಿಯನ್ನು ಹೊಂದಿ ಹೆತ್ತವರ ಋಣ ತೀರಿಸಬೇಕು. ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯು ಎಲ್ಲಾ ರೀತಿಯ ಸೌಲಭ್ಯವನ್ನು ಹೊಂದಿರುವುದರಿಂದ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಕಲಿತು ಉತ್ತಮ ವ್ಯಕ್ತಿಗಳಾಗಿ ಹೊರಗೆ ಬರಬೇಕು. ಆಂಗ್ಲಭಾಷೆ ಅಂತರಾಷ್ಟ್ರೀಯ ಭಾಷೆ ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬಹುದು” ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ ಬಿ ಪದ್ಮನಾಭ ಗೌಡ ಇವರು ಹೇಳಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಬಿ.ಬಿ ಆಯಿಷಾ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಸ್ಥ ಶ್ರೀಮತಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊ. ಬಿ.ಪದ್ಮನಾಭ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಆಡಳಿತ ಸಂಸ್ಥೆಯ ಸದಸ್ಯರಾದ ಶ್ರೀ ನದಾಫ್ ಅಹಮ್ಮದ್ ರವರು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ವಿದ್ಯಾರ್ಥಿ ಜೀವನದ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಲಾರಾದ ಕೆ. ಬಾಲಕೃಷ್ಣ ರಾವ್‌ ರವರು ಅಧ್ಯಕ್ಷ ಭಾಷಣ ಮಾಡುತ್ತಾ ಪ್ರಸಕ್ತ ವರ್ಷದಲ್ಲಿ ನಡೆಸಬೇಕಾದ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಜಿತ್ ಎಂಬ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿ ವಿಭಾಗಕ್ಕೆ ದತ್ತು ತೆಗೆದುಕೊಳ್ಳಲಾಯಿತು.

ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿಯವರು ವಂದಿಸಿದರು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಶೀದ್ ಇವರು ಕಾರ್ಯಕ್ರಮ ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಕೀಟ ಸಚೇತನ ದಿನ

2017ರಲ್ಲಿ ಚೀನಾದ ಬೀಜಿಂಗ್ನಲ್ಲಿ ನಡೆದ ಸಮ್ಮೇಳನದಲ್ಲಿ ಈ ದಿನವನ್ನು ಪ್ರಾರಂಭಿಸಲಾಯಿತು.

ಈರುಳ್ಳಿ ರಸದಿಂದ ಆರೋಗ್ಯಕ್ಕೆ ಅಪಾರ ಲಾಭ: ವೈದ್ಯಕೀಯವಾಗಿ ಸಾಬೀತಾದ ಪ್ರಾಮುಖ್ಯತೆ

ಪ್ರತಿದಿನದ ಅಡುಗೆಗೆ ಅತ್ಯಗತ್ಯವಾದ ಈರುಳ್ಳಿಯು ಆರೋಗ್ಯದ ದೃಷ್ಟಿಯಿಂದ ಕೂಡಾ ಅಪಾರ ಮಹತ್ವ ಹೊಂದಿದೆ. ಇತ್ತೀಚೆಗೆ ನಡೆಸಿದ ಹಲವು ಅಧ್ಯಯನಗಳು ಹಾಗೂ ಆಯುರ್ವೇದ ತಜ್ಞರ ಅಭಿಪ್ರಾಯಗಳ ಪ್ರಕಾರ, ಈರುಳ್ಳಿಯಿಂದ ತಯಾರಿಸಿದ ರಸದ ಸೇವನೆಯು ದೇಹಕ್ಕೆ ಹಲವು ರೀತಿಯ ಲಾಭಗಳನ್ನು ನೀಡುತ್ತದೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ LKG UKG ತರಗತಿಗಳ ಪ್ರಾರಂಭ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು

ನಾಳೆ ಪ್ರಧಾನಿ ಮೋದಿಯವರಿಂದ ಪ್ರಪಂಚದ ಅತ್ಯಂತ ಎತ್ತರದ ಚೆನಾಬ್ ಸೇತುವೆಯ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.