ಗಾರ್ಬಾ ಪೆಂಡಾಲ್‌ನಲ್ಲಿ ‘ಅಸಹ್ಯ’ ವರ್ತನೆ : ಸಾರ್ವಜನಿಕವಾಗಿ ಚುಂಬಿಸಿ ಕ್ಷಮೆ ಕೇಳಿದ ಆಸ್ಟ್ರೇಲಿಯಾದ NRI ದಂಪತಿ

Date:

spot_img

ವಡೋದರಾ (ಗುಜರಾತ್): ನವರಾತ್ರಿ ಸಂಭ್ರಮದ ಗಾರ್ಬಾ ನೃತ್ಯದ ಪೆಂಡಾಲ್‌ನಲ್ಲಿ NRI ದಂಪತಿಯೊಂದು ಸಾರ್ವಜನಿಕವಾಗಿ ಚುಂಬಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ‘ಅಸಹ್ಯ ವರ್ತನೆ’ಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ, ಆಸ್ಟ್ರೇಲಿಯದಲ್ಲಿ ನೆಲೆಸಿರುವ ಭಾರತೀಯ ಮೂಲದ ಈ ದಂಪತಿ ಕ್ಷಮೆಯಾಚಿಸಿದ್ದಾರೆ.

ನವರಾತ್ರಿ ಹಬ್ಬದ ಸಾಂಸ್ಕೃತಿಕ ಮತ್ತು ಧಾರ್ಮಿಕ ಪಾವಿತ್ರ್ಯವನ್ನು ಉಲ್ಲಂಘಿಸಲಾಗಿದೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋವನ್ನು ಖಂಡಿಸಿದ್ದಾರೆ. ನೃತ್ಯದ ಸ್ಥಳದಲ್ಲಿ ಸುತ್ತಲೂ ಜನರು ಇದ್ದರೂ ದಂಪತಿ ಬಿಂದಾಸ್‌ ಆಗಿ ಚುಂಬಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವರು ಈ ಕೃತ್ಯವನ್ನು ‘ಅಶ್ಲೀಲ’ ಎಂದು ಬಣ್ಣಿಸಿ, ದಂಪತಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದರು.

ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದ ಕಾರಣ, ವಿವಾದಕ್ಕೀಡಾದ ಆ ದಂಪತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ತಮ್ಮ ವರ್ತನೆಗೆ ವಿಷಾದ ವ್ಯಕ್ತಪಡಿಸಿ, ಕ್ಷಮಾಪಣಾ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ.

ಕ್ಷಮೆಯಾಚನೆಯ ನಂತರ, ದಂಪತಿ ತಕ್ಷಣವೇ ಆಸ್ಟ್ರೇಲಿಯಕ್ಕೆ ವಾಪಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಂಸ್ಕೃತಿಕ ಹಬ್ಬದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದು ಗುಜರಾತ್‌ನ ಸಾಂಪ್ರದಾಯಿಕ ಉತ್ಸಾಹಕ್ಕೆ ಭಂಗ ತಂದಿದ್ದು, ವಡೋದರಾ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.