spot_img

ಮುದ್ರಾಡಿ ಪ್ರೌಢಶಾಲೆಯಲ್ಲಿ ಕ್ರೀಡಾ ಸಮವಸ್ತ್ರ ವಿತರಣೆ

Date:

spot_img
spot_img

ಹೆಬ್ರಿ : “ಮಕ್ಕಳ ಮನಸ್ಸು ಪಾಠಕ್ಕಿಂತಲೂ ಆಟದ ಕಡೆಗೆ ಹೆಚ್ಚು ಹಾತೊರೆಯುವಂತದ್ದು. ಆಟದ ನಂತರ ಪಾಠ ಇದ್ದಾಗ ಅವರ ಮೈ ಮನಸ್ಸು ತುಂಬಾ ಪ್ರಫುಲ್ಲಗೊಳ್ಳುತ್ತದೆ. ಕಲಿಕೆ ಸುಗಮವಾಗುತ್ತದೆ. ಜ್ಞಾನಕ್ಕಿಂತಲೂ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಈಗಲೇ ಹೊಂದಿರಬೇಕು. ಮತ್ತು ಅದಕ್ಕೆ ಪೂರಕವಾಗಿ ಸಾಗಬೇಕು. ಕಠಿಣ ಪರಿಶ್ರಮದ ಫಲ ಸಿಹಿಯಾಗಿರುತ್ತದೆ” ಎಂದು ಕಾಪು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಸುನಿಲ್ ಕುಮಾರ್ ಶೆಟ್ಟಿ ಗುಮ್ಮಗುಂಡಿ ಬಲ್ಲಾಡಿ ಹೇಳಿದರು. ಅವರು ಎಂ.ಎನ್.ಡಿ.ಎಸ್.ಎಂ.ಅನುದಾನಿತ ಪ್ರೌಢಶಾಲೆ ಮುದ್ರಾಡಿಯಲ್ಲಿ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು.ಅವರು 1994-95ರ ಸಾಲಿನ ಹಿರಿಯ ವಿದ್ಯಾರ್ಥಿನಿ ಮತ್ತು 2001-02 ರ ಸಾಲಿನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ಕೊಡಮಾಡಿದ ಕ್ರೀಡಾ ಸಮವಸ್ತ್ರದ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾಸಾಗರ ಎಜ್ಯುಕೇಶನ್ ಟ್ರಸ್ಟ್ (ರಿ) ನ ಕಾರ್ಯದರ್ಶಿ ಶ್ರೀ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಶಾಲೆಯ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಮಣಿಪಾಲ ಎಂ.ಐ.ಟಿ. ಯ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರೂಪಶ್ರೀ , ಮುದ್ರಾಡಿ ಸಮೃದ್ಧಿಯ ಸುನೀಲ್ ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರಶೇಖರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹಿರಿಯ ಶಿಕ್ಷಕ ಶ್ರೀ ಮಹೇಶ ನಾಯ್ಕ. ಕೆ. ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ರಘುಪತಿ ಹೆಬ್ಬಾರ್ ವಂದಿಸಿದರು. ಶಿಕ್ಷಕರಾದ ಶ್ರೀ ಆನಂದ ಪಿ. ವಿ. , ಶ್ರೀಮತಿ ಶ್ಯಾಮಲಾ ಕೊಠಾರಿ , ಶ್ರೀಮತಿ ಚಂದ್ರಕಾಂತಿ ಹೆಗ್ಡೆ ಹಾಗೂ ಶಿಕ್ಷಕೇತರ ಸಿಬ್ಬಂದಿ ಶ್ರೀ ಮಹೇಶ್ ಎಂ. ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಡ್‌ ಪಾಯ್ಸನಿಂಗ್ ಏಕೆ ಆಗುತ್ತದೆ? ಈ ಸಂದರ್ಭಗಳಲ್ಲಿ ಏನು ತಿನ್ನಬೇಕು, ಏನು ತಿನ್ನಬಾರದು?

ಫುಡ್‌ ಪಾಯ್ಸನಿಂಗ್‌ನಿಂದಾಗಿ ಆರೋಗ್ಯ ಹದಗೆಡುತ್ತದೆ, ಹೊಟ್ಟೆ ನೋವು, ಅತಿಸಾರ (ಲೂಸ್‌ಮೋಷನ್‌), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಾಡುತ್ತವೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ: ‘ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಪ್ಪೇನಿದೆ?’ – ತಮಿಳುನಾಡು ಮಾದರಿ ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.