spot_img

“ ಐದು ವರ್ಷವೂ ನಾನೇ ಸಿಎಂ” ಎಂದ ಸಿದ್ದರಾಮಯ್ಯ – “ನನಗೆ ಬೇರೆ ದಾರಿ ಇಲ್ಲ, ಬೆಂಬಲಿಸುತ್ತೇನೆ” ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ

Date:

spot_img

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಇಂದು ನಿರ್ಣಾಯಕ ಬೆಳವಣಿಗೆ ನಡೆದಿದೆ. “ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ ಬೆನ್ನಲ್ಲೇ ಡಿಪ್ಟಿ ಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಸ್ಪಂದಿಸಿ, “ನನಗೆ ಬೇರೆ ದಾರಿ ಇಲ್ಲ. ನಾನು ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ನಂದಿ ಗಿರಿಧಾಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನದಂತೆ ಮುಂದಿನ ಐದು ವರ್ಷಗಳ ಕಾಲ ಅವರು ಅಧಿಕಾರದಲ್ಲಿರುತ್ತಾರೆ ಎಂದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, “ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ. ಹೈಕಮಾಂಡ್ ಏನು ತೀರ್ಮಾನಿಸಿದರೂ ನಾನು ಅದನ್ನು ಗೌರವಿಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.

ಇತ್ತ ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿನಲ್ಲಿ ಶಾಸಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸುತ್ತಿದ್ದು, ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಡಿಕೆಶಿಯ ಈ ‘ಬ್ಯಾಕ್ಫುಟ್‌’ ತೀರ್ಮಾನದಿಂದ ಅವರ ಭವಿಷ್ಯದ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪೊಲೀಸ್ ಅಧಿಕಾರಿಗೆ ಸಿಎಂ ಸಭೆಯಲ್ಲಿ ಅವಮಾನ : ಭರಮನಿ ನಿವೃತ್ತಿ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಬೆಳಗಾವಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಕ್ಕೊಳಗಾದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ, ತೀವ್ರ ಅಸಹನೆ ವ್ಯಕ್ತಪಡಿಸಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

“ಆರ್ಥಿಕ ತೊಂದರೆಯಿಲ್ಲ, ಗ್ರಾಹಕರ ಹಣ ಸಂಪೂರ್ಣ ಸುರಕ್ಷಿತ” — ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಸ್ಪಷ್ಟನೆ

ಮಂಗಳೂರು ಮೂಲದ ಖಾಸಗಿ ವಲಯದ ಸಾಲದಾತ ಸಂಸ್ಥೆಯಾದ ಕರ್ನಾಟಕ ಬ್ಯಾಂಕ್ ಯಾವುದೇ ಆರ್ಥಿಕ ತೊಂದರೆಯಲ್ಲಿಲ್ಲ ಎಂದು ಬ್ಯಾಂಕಿನ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜಾ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ತಾಯಿ-ಮಗನ ಗಂಟಲು ಸೀಳಿ ಬರ್ಬರ ಹತ್ಯೆ: ಮನೆ ಕೆಲಸದವನೇ ಕ್ರೂರ ಕೃತ್ಯಕ್ಕೆ ಕೈಹಾಕಿದ ದಾರುಣ ಘಟನೆ!

ದೆಹಲಿಯ ಲಜಪತ್ ನಗರದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಗಂಟಲು ಸೀಳಿ ಹತ್ಯೆ ಮಾಡಿದ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. 42 ವರ್ಷದ ರುಚಿಕಾ ಸೇವಾನಿ ಹಾಗೂ ಆಕೆಯ 10 ವರ್ಷದ ಮಗ ಕ್ರಿಶ್ ಮೃತಪಟ್ಟ ದುರ್ದೈವಿಗಳು. ಇವರನ್ನು ಹತ್ಯೆಗೈದ ವ್ಯಕ್ತಿ ಮನೆ ಕೆಲಸದವನಾಗಿದ್ದ ಮುಖೇಶ್ ಎನ್ನಲಾಗಿದೆ.

‘ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರಲಿಲ್ಲ’ – ಯಶ್ ತಾಯಿ ಪುಷ್ಪ ಅವರ ಮಾತುಗಳ ಮೇಲೆ ನೆಟ್ಟಿಗರಿಂದ ಟ್ರೋಲ್

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ಗೆ ತುತ್ತಾಗಿದ್ದಾರೆ. ನಟನ ತಾಯಿ ಎಂಬ ಕಾರಣಕ್ಕಲ್ಲ, ಅವರು ಹೊಸ ಸಿನಿಮಾ ನಿರ್ಮಾಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೈಲಿಯೇ ಈ ಟ್ರೋಲ್‌ಗಳಿಗೆ ಕಾರಣವಾಗಿದೆ.