ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು, ಪತಿ ಪೋಲೀಸರ ವಶಕ್ಕೆ

Date:

spot_img

ಬೆಂಗಳೂರು : ಮದುವೆಯಾಗಿ ಕೇವಲ ಮೂರೇ ವರ್ಷಕ್ಕೆ 26 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಇದು ವರದಕ್ಷಿಣೆ ಕಿರುಕುಳದಿಂದ ನಡೆದ ಕೊಲೆ ಎಂದು ಮೃತರ ಪೋಷಕರು ಗಂಭೀರ ಆರೋಪ ಮಾಡಿದ್ದು, ಪೊಲೀಸರು ಪತಿಯನ್ನು ವಶಕ್ಕೆ ಪಡೆದಿದ್ದಾರೆ.

ದುರಂತದ ಹಿನ್ನೆಲೆ

ಮೃತೆ ಶಿಲ್ಪಾ ಮೂಲತಃ ಹುಬ್ಬಳ್ಳಿಯವರಾಗಿದ್ದು, ಅವರ ಕುಟುಂಬವು ಎರಡು ದಶಕಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿತ್ತು. ಶಿಲ್ಪಾ ಅವರು ಬಿ.ಟೆಕ್ ಪದವೀಧರೆಯಾಗಿದ್ದು, ಇನ್ಫೋಸಿಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಮೂರು ವರ್ಷಗಳ ಹಿಂದೆ, 2022ರಲ್ಲಿ, ಪ್ರವೀಣ್ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗನಿದ್ದು, ಶಿಲ್ಪಾ ಗರ್ಭಿಣಿಯಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪೋಷಕರ ಆರೋಪಗಳು

ಶಿಲ್ಪಾ ಕುಟುಂಬವು ಮದುವೆಗಾಗಿ 50 ಲಕ್ಷ ರೂ. ಮತ್ತು 160 ಗ್ರಾಂ ಚಿನ್ನಾಭರಣ ನೀಡಿತ್ತು. ಆದರೂ, ಮದುವೆಯ ನಂತರವೂ ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಮೂರು ತಿಂಗಳ ಹಿಂದೆಯೂ ಪ್ರವೀಣ್, ಹೆಚ್ಚುವರಿಯಾಗಿ 10 ಲಕ್ಷ ರೂ. ಬೇಡಿಕೆ ಇಟ್ಟು ಜಗಳ ಮಾಡಿದ್ದ ಎಂದು ತಾಯಿ ಶಾರದಾ ಹೇಳಿದ್ದಾರೆ. ಚಿಕ್ಕಪ್ಪ ಚೆನ್ನಬಸಯ್ಯ ಅವರ ಪ್ರಕಾರ, ಪ್ರವೀಣ್ ತಾನು ಬಿ.ಇ., ಎಂ.ಟೆಕ್ ಪದವೀಧರ ಎಂದು ಹೇಳಿಕೊಂಡು, ನಂತರ ಪಾನಿಪುರಿ ವ್ಯಾಪಾರ ಮಾಡುತ್ತಿದ್ದ. ಆದರೂ ಕೂಡ, ಕೆಲಸ ಮಾಡುತ್ತಿದ್ದ ಶಿಲ್ಪಾಗೆ ಕಿರುಕುಳ ಮುಂದುವರಿಸಿದ್ದ ಎಂದು ದೂರಿದ್ದಾರೆ.

ಆಗಸ್ಟ್ 26ರ ರಾತ್ರಿ ಶಿಲ್ಪಾ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬವು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಸದ್ಯ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಪತಿ ಪ್ರವೀಣ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.