spot_img

ಮೈತ್ರಿ ಸೇವಾ ಸಂಘದಿಂದ ಡಾ।ಎಂ.ಬಿ ಆಚಾರ್ ಅವರಿಗೆ ನಾಗರಿಕ ಸಂಮಾನ

Date:

ಮೈತ್ರಿ ಸೇವಾ ಸಂಘ (ರಿ) ಬೈಲೂರು , ಇವರ ವತಿಯಿಂದ ಬೈಲೂರು ಗ್ರಾಮಾಂತರ ಭಾಗದಲ್ಲಿ ಕಳೆದ ಐದು ದಶಕಗಳಿಂದ ವೈದ್ಯಕೀಯ ಸೇವೆಯನ್ನು ನೀಡಿದ ಡಾ।ಎಂ ಬಾಲಕೃಷ್ಣ ಆಚಾರ್ ಇವರಿಗೆ ನಾಗರಿಕ ಸಂಮಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಕಾರ್ಯಕ್ರಮವು ಮೈತ್ರಿ ಸೇವಾ ಸಂಘ ಬೈಲೂರು ಇದರ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೈಲೂರು ಅರ್ಚನಾ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಪ್ರಾಸ್ತಾವಿಕವಾಗಿ ಮೈತ್ರಿ ಸೇವಾ ಸಂಘದ ಸದಸ್ಯರಾದ ಶ್ರೀ ವಿಕ್ರಂ ಹೆಗ್ಡೆಯವರು ಸನ್ಮಾನಿತಾರಾದ ಡಾ।ಎಂ. ಬಿ ಆಚಾರ್ ರವರ 5 ದಶಕಗಳ ಸೇವೆಯ ಬಗ್ಗೆ, ಹಾಗೂ ಅವರು ನೀಡುತ್ತಿದ್ದ ಚಿಕಿತ್ಸೆಯ ಬಗ್ಗೆ, ಅವರ ಕಾರ್ಯವೈಖರಿಯ ಬಗ್ಗೆ, ಅವರ ಸಾಮಾಜಿಕ ಕಳಕಳಿಯ ಬಗ್ಗೆ, ಕೊರೋನ ಸಮಯದಲ್ಲಿ ಜನರಿಗೆ ಚಿಕಿತ್ಸೆಯ ಜೊತೆಗೆ ಮಾನಸಿಕ ಧೈರ್ಯ ತುಂಬಿರುವ ಬಗ್ಗೆ ಸಂತೋಷದ ಜೊತೆಗೆ ಹೆಮ್ಮೆಯನ್ನು ವ್ಯಕ್ತ ಪಡಿಸುತ್ತಾ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ನೆರವೇರಿಸಿ ಡಾ।ಎಂ.ಬಿ ಆಚಾರ್ ರವರ ಐದು ದಶಕಗಳ ಸೇವೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅವರಿಗೆ ಶುಭ ಕೋರಿದರು.

ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಗಳು ಮೂಡಬಿದ್ರೆ ಇದರ ಅಧ್ಯಕ್ಷರಾದ ಡಾ।ಎಂ.ಮೋಹನ್ ಆಳ್ವಾರವರು ಆಗಿನ ಕಾಲದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿದ್ದಂತಹ ಸವಾಲುಗಳ ಬಗ್ಗೆ , ಅವರು ನಡೆದು ಬಂದ ದಾರಿಯ ಬಗ್ಗೆ, ಅವರ ಜೊತೆ ಇರುವ ಒಡನಾಟದ ಬಗ್ಗೆ ಹಾಗೂ ಅವರ ಜೊತೆ ರಂಗ ಭೂಮಿಯಲ್ಲಿ ಜೊತೆಯಾಗಿ ನಟಿಸಿರುವ ಬಗ್ಗೆ ಅಭಿನಂದನಾ ಭಾಷಣದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ವಿದ್ಯಾ ಸಂಸ್ಥೆ, ಗಣಿತ ನಗರದ ಅಧ್ಯಕ್ಷರಾದ ಡಾ।ಶ್ರೀ ಸುಧಾಕರ್ ಶೆಟ್ಟಿ, ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ।ಜಿ.ಎಸ್ ಚಂದ್ರಶೇಖರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸನ್ಮಾನಿತರ ಬಗ್ಗೆ ಅಭಿನಂದನಾರ್ಹ ಮಾತುಗಳನ್ನಾಡಿದರು. ಮೈತ್ರಿ ಸೇವಾ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ. ಚಂದ್ರಶೇಖರ್ ಮಾಡರವರು ಉಪಸ್ಥಿತರಿದ್ದರು.

ಪ್ರಾರ್ಥನೆಯನ್ನು ಕ್ಷಿತಿ ಸುಂದರ್ ಶೆಟ್ಟಿ ನಡೆಸಿಕೊಟ್ಟರು.ಮೈತ್ರಿ ಸೇವಾ ಸಂಘದ ಸದಸ್ಯರಾದ ಶ್ರೀ ಉದಯಹೆಗ್ಡೆ ಸ್ವಾಗತ ಭಾಷಣವನ್ನು ಮಾಡಿದರು. ಶ್ರೀ ರಮೇಶ್ ಕಲ್ಲೊಟ್ಟೆ ಸನ್ಮಾನ ಪತ್ರ ವಾಚನ ಮಾಡಿದರು.ಕಾರ್ಯಕ್ರಮದ ಸಂಪೂರ್ಣ ನಿರೂಪಣೆಯನ್ನು ರವೀಂದ್ರ ನಾಯಕ್ ನಡೆಸಿಕೊಟ್ಟರು ಹಾಗೂ ಶ್ರೀ ಮಹೇಶ್ ರಾವ್ ರವರು ಧನ್ಯವಾದವನ್ನಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.