ಡಾ! ಮುಖರ್ಜಿ ಜೀವನಾದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣೆ

Date:

spot_img

ಕುತ್ಯಾರು : ರಾಷ್ಟ್ರೀಯತೆಯನ್ನೇ ಉಸಿರಾಗಿಸಿಕೊಂಡಿದ್ದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ, ಬಲಿದಾನದಿಂದ ಬಿಜೆಪಿ ಕಾರ್ಯಕರ್ತರು ಪ್ರೇರಣೆ ಪಡೆಯಬೇಕು. ಡಾ! ಮುಖರ್ಜಿ ಕನಸು ಪ್ರಧಾನಿ ಮೋದಿ ಅವರಿಂದ ನನಸಾಗಿದೆ. ಕಾಟಾಚಾರದ ಬದಲು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಜನ ಸೇವೆ, ಜನ ಜಾಗೃತಿಯಲ್ಲಿ ತೊಡಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶಾಮಪ್ರಸಾದ್ ಮುಖರ್ಜಿ ‘ಬಲಿದಾನ ದಿವಸ್’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ! ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಡಾ! ಶಾಮ ಪ್ರಸಾದ್ ಮುಖರ್ಜಿ ಅವರ ತತ್ವಾದರ್ಶಗಳು ಮತ್ತು ಬಲಿದಾನದ ಕುರಿತು ಉಪನ್ಯಾಸ ನೀಡಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಇಂಗ್ಲೆಂಡ್ ನಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ವಕೀಲಿ ವೃತ್ತಿ ನಡೆಸಿದ ಡಾ! ಮುಖರ್ಜಿ ಅವರು ದೇಶ ವಿಭಜನೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರಾಗಿದ್ದರೂ ಹಿಂದೂ ಮಹಾಸಭಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನೆಹರೂ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿದ್ದ ಡಾ! ಮುಖರ್ಜಿ ಅವರು ಜಮ್ಮು ಕಾಶ್ಮೀರದ ವಿಚಾರದಲ್ಲಿ ಭಿನ್ನಮತ ಬಂದಾಗ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಜನಸಂಘದ ಮೂಲಕ ಭಾರತೀಯ ಜನತಾ ಪಾರ್ಟಿಗೂ ಪ್ರೇರಣೆಯನ್ನು ನೀಡಿದ್ದಾರೆ. ‘ಒಂದು ದೇಶದಲ್ಲಿ ಎರಡು ಧ್ವಜ, ಎರಡು ಸಂವಿಧಾನ, ಎರಡು ಪ್ರಧಾನಿ ಸಲ್ಲದು’ ಎಂಬ ಅವರ ಕನಸು ಇಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಸಂವಿಧಾನದ 370ನೇ ವಿಧಿ ರದ್ದತಿಯ ಮೂಲಕ ನನಸಾಗಿದೆ. ಆದರೆ ಅವರ ಸಾವು ಮಾತ್ರ ಇಂದಿಗೂ ಸಂಶಯಸ್ಪದವಾಗಿಯೇ ಇದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಪ್ರಮುಖರಾದ ಸತ್ಯಾನಂದ ನಾಯಕ್, ಶ್ರೀಕಾಂತ್ ನಾಯಕ್, ಗಿರೀಶ್ ಎಮ್. ಅಂಚನ್, ದಿನೇಶ್ ಅಮೀನ್, ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ನಳಿನಿ ಪ್ರದೀಪ್ ರಾವ್, ಸಲೀಂ ಅಂಬಾಗಿಲು, ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ವಿಜಯ್ ಭಟ್ ಕಡೆಕಾರ್, ಕಿಶೋರ್ ಕರಂಬಳ್ಳಿ, ಗುರುರಾಜ್, ಶ್ರೀವತ್ಸ, ನಿತಿನ್ ಪೈ, ಅರುಣ್ ಬಾಣ, ಗೋಪಾಲ್ ಕಾಂಚನ್, ಸದಾನಂದ ಪ್ರಭು ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.