spot_img

ಪಾಕಿಸ್ತಾನದಿಂದ ಮತ್ತೆ ಡ್ರೋನ್ ದಾಳಿ: ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ, ಭಾರತೀಯ ಸೇನೆ ತಕ್ಷಣ ಪ್ರತಿದಾಳಿ!

Date:

spot_img
spot_img

ಹೊಸದಿಲ್ಲಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಗುರುವಾರದ ಬಳಿಕ ಶುಕ್ರವಾರ ರಾತ್ರಿ ಕೂಡ ಪಾಕಿಸ್ತಾನದಿಂದ ಡ್ರೋನ್ ದಾಳಿಗಳು ನಡೆದಿವೆ. ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಹಾಗೂ ಗುಜರಾತ್ ಗಡಿ ಪ್ರದೇಶಗಳ 26ಕ್ಕೂ ಹೆಚ್ಚು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್ ಗಳನ್ನು ಹಾರಿಸಿದೆ.

ಜಮ್ಮು ಕಾಶ್ಮೀರದ ಜಮ್ಮು, ಸಾಂಬಾ, ರಾಜೇರಿ, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ ಮತ್ತು ರಾಜಸ್ಥಾನದ ಜೈಸಲ್‌ಮೇರ್, ಬಾರ್ಮರ್, ಪೋಖ್ರಾನ್
ಕಡೆಗೆ ಡ್ರೋನ್ ಗಳನ್ನು ಉಡಿಸಲಾಗಿದೆ. ವಿಶೇಷವಾಗಿ, ಎಲ್‌ಒಸಿ ಬಳಿ ಉತ್ತರ ಕಾಶ್ಮೀರದ ಕುಸ್ವಾರಾ, ಸಾಂಬಾ, ಪೂಂಚ್, ಉರಿ ಹಾಗೂ ನೌಗಮ್ ಪ್ರದೇಶಗಳಲ್ಲಿ ಗುಂಡಿನ ದಾಳಿಯೂ ನಡೆದಿದೆ.

ಭಾರತೀಯ ಸೇನೆ ಜೈಸರ್‌ನಲ್ಲಿ ಒಂಬತ್ತು ಮತ್ತು ಬಾರ್ಮರ್‌ನಲ್ಲಿ ಒಂದು ಡ್ರೋನ್ ಅನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ ಬೆಳಗ್ಗಿನಿಂದ ಯಾವುದೇ ಡ್ರೋನ್ ದಾಳಿ ನಡೆದಿಲ್ಲವಾದರೂ ಪಾಕಿಸ್ತಾನ ಗುಂಡಿನ ದಾಳಿ ಮುಂದುವರೆಸಿದ್ದು, ಭಾರತ ಕೂಡ ತಕ್ಷಣ ಪ್ರತಿದಾಳಿ ನೀಡಿದೆ.

ರಾತ್ರಿ ಡ್ರೋನ್ ದಾಳಿ ವೇಳೆ ಜಮ್ಮು ಕಾಶ್ಮೀರದ ಆವಂತಿಪೋರಾದ ಏರ್‌ಬೇಸ್ ಗುರಿಯಾಗಿದ್ದು, ಅಲ್ಲಿಯ ಡ್ರೋನ್ ಅನ್ನು ಭಾರತ ವಾಯುಸೇನೆ ಆಕಾಶದಲ್ಲೇ ನಾಶಪಡಿಸಿದೆ. ಪಾಕಿಸ್ತಾನದ ಡ್ರೋನ್ ಗಳ ಶಬ್ದ ಗಡಿ ಪ್ರದೇಶಗಳಲ್ಲಿ ಭಯಚಕಿತ ಪರಿಸ್ಥಿತಿಯನ್ನುಂಟುಮಾಡಿದೆ.

ಇನ್ನು ಪಂಜಾಬ್‌ನ ಫಿರೋಜ್‌ಪುರದಲ್ಲಿ ಡ್ರೋನ್ ಒಂದು ಮನೆಯ ಮೇಲೆ ಬಿದ್ದು ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ. ಈ ದಾಳಿಯಿಂದ ಪಾಕಿಸ್ತಾನ ಮತ್ತೊಮ್ಮೆ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಸೃಷ್ಟಿಸಿದ್ದು, ಭಾರತೀಯ ಸೇನೆ ತಕ್ಷಣ ಪ್ರತಿರೋಧದ ಕಾರ್ಯಾಚರಣೆಯಲ್ಲಿ ತೊಡಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ

ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.