spot_img

ʻದಸರಾ ಸಾಂಸ್ಕೃತಿಕ ಆಚರಣೆ, ಧಾರ್ಮಿಕ ಆಚರಣೆಯಲ್ಲʼ : ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಕೆಶಿ ತಿರುಗೇಟು

Date:

spot_img
dks

ಮೈಸೂರು : ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಸಿ.ಎಂ ಡಿ.ಕೆ. ಶಿವಕುಮಾರ್, ʻದಸರಾ ಧಾರ್ಮಿಕ ಆಚರಣೆಯಲ್ಲ, ಸಾಂಸ್ಕೃತಿಕ ಆಚರಣೆʼ ಎಂದು ತಿರುಗೇಟು ನೀಡಿದ್ದಾರೆ.

ಬಾನು ಮುಷ್ತಾಕ್‌ ಚಾಮುಂಡಿಬೆಟ್ಟ ಹತ್ತುವಂತಿಲ್ಲ ಎಂಬ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಚಾಮುಂಡಿಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಸಮುದಾಯದವರೂ ಅಲ್ಲಿಗೆ ಹೋಗುತ್ತಾರೆ’ ಎಂದು ಹೇಳಿದರು.

‘ಹಿಂದೂಗಳು ಮಸೀದಿ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತಾರೆ. ರಾಮಮಂದಿರಕ್ಕೆ ಹಿಂದೂಗಳಷ್ಟೇ ಬರಬೇಕು ಎಂದು ಯಾಕೆ ಬೋರ್ಡ್ ಹಾಕಿಲ್ಲ?’ ಎಂದು ಪ್ರಶ್ನಿಸುವ ಮೂಲಕ ಡಿಕೆಶಿ ವಾಗ್ದಾಳಿ ನಡೆಸಿದರು. ಇದು ವೈಯಕ್ತಿಕ ವಿಚಾರವಲ್ಲ, ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಅವರು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

ಬಾಳೆ ಹೂವು: ಆರೋಗ್ಯಕ್ಕೆ ಅಮೃತ, ರುಚಿಗೆ ರಾಜ

ರಂಭಾ ಪುಷ್ಪ, ಕದಲೀ ಪುಷ್ಪ ಎಂದು ಕರೆಯಲ್ಪಡುವ ಬಾಳೆ ಕುಂಡಿಗೆಯು ಔಷಧೀಯ ಗುಣಗಳನ್ನು ಹೊಂದಿದೆ.

ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಕೊಂದ ಸೊಸೆ

ಪ್ರಿಯಕರನ ಜೊತೆ ಸೇರಿ ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಅಜ್ಜಂಪುರ ತಾಲ್ಲೂಕಿನ ತಡಗ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನಿಂದಲೇ ಬರ್ಬರ ಕಗ್ಗೊಲೆ: ಮಹಿಳೆಯ ಬಾಯಿಗೆ ಜಿಲೆಟಿನ್ ಇಟ್ಟು ಸ್ಫೋಟಿಸಿದ ಆರೋಪಿ

ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಕಗ್ಗೊಲೆ ಮಾಡಿರುವ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ.