ಹೆಬ್ರಿಯ ಮುಟ್ಲುಪಾಡಿಗೆ ಲಗ್ಗೆ ಇಟ್ಟ ಒಂಟಿ ಸಲಗ, ಕಂಗು-ಬಾಳೆ ತೋಟ ಧ್ವಂಸ!

Date:

spot_img

ಹೆಬ್ರಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮುಟ್ಲುಪಾಡಿಯಲ್ಲಿ ಇದೀಗ ಆನೆಯ ಹಾವಳಿ ಶುರುವಾಗಿದೆ. ಇಲ್ಲಿಯವರೆಗೆ ಕಾಡುಪ್ರಾಣಿಗಳ ಹಾವಳಿ ಸಾಮಾನ್ಯವಾಗಿದ್ದರೂ, ಆನೆಗಳ ಉಪಟಳ ಕಂಡುಬಂದಿರಲಿಲ್ಲ. ಆದರೆ, ಹಲವು ದಿನಗಳಿಂದ ಒಂಟಿ ಸಲಗವೊಂದು ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ ಎಂಬ ಸುದ್ದಿಯ ಬೆನ್ನಲ್ಲೇ, ಶುಕ್ರವಾರ ಮುಂಜಾನೆ ಈ ಘಟನೆ ವರದಿಯಾಗಿದೆ.

ಗ್ರಾಮದ ಕೃಷಿಕರಾದ ನಾಗಯ್ಯ ನಾಯ್ಕ್ ಅವರ ತೋಟದಲ್ಲಿ ಆನೆಯು ಕಂಗು, ಬಾಳೆ ಬೆಳೆಗಳನ್ನು ಮತ್ತು ತೋಟದ ತಡೆಗೋಡೆಯನ್ನು ಧ್ವಂಸಗೊಳಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಆತಂಕಗೊಂಡಿರುವ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆನೆಯ ಹಾವಳಿಯಿಂದ ರೈತರಿಗೆ ಆಗಿರುವ ನಷ್ಟದ ಬಗ್ಗೆ ಅಂದಾಜು ಹಾಕಲಾಗುತ್ತಿದೆ. ಗ್ರಾಮಸ್ಥರು ಆನೆ ಸೆರೆ ಹಿಡಿಯುವಂತೆ ಅಥವಾ ಕಾಡಿಗಟ್ಟುವಂತೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.