
ಹೆಬ್ರಿ : ಹೆಬ್ರಿ ತಾಲೂಕಿನ ಸೀತಾನದಿ ಬೆಳಾರ್ ಪ್ರದೇಶದಲ್ಲಿ ಆನೆಗಳು ಮತ್ತೆ ದಾಳಿ ನಡೆಸಿದ್ದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. ಆನೆಗಳು ಮನೆಗಳ ಗೇಟ್ ಮುರಿದು ಹಾನಿ ಮಾಡಿದ್ದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ.
ಹೆಬ್ರಿಯಿಂದ ನೆಲ್ಲಿಕಟ್ಟೆವರೆಗೆ ಮಾತ್ರ ಬಸ್ ಸೌಲಭ್ಯ ಲಭ್ಯವಿದ್ದು, ನಂತರ ಶಾಲಾ ಮಕ್ಕಳು ಮತ್ತು ಇತರರು ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ಇರುವುದರಿಂದ ಆನೆಗಳ ಈ ದಾಳಿಯಿಂದ ಜನರು ಭಯಭೀತರಾಗಿದ್ದಾರೆ.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರದೇಶವನ್ನು ಪರಿಶೀಲಿಸಿ, ರಾತ್ರಿ 7:00 ಗಂಟೆಯ ನಂತರ ಒಬ್ಬಂಟಿಯಾಗಿ ಓಡಾಡಬಾರದು ಮತ್ತು ದ್ವಿಚಕ್ರ ವಾಹನಗಳಲ್ಲಿ ಸಂಚರಿಸಬಾರದೆಂದು ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದ್ದಾರೆ.