spot_img

ಭಾರತದಲ್ಲಿ ಎಲಾನ್ ಮಸ್ಕ್‌ನ ಎಐ ಚಾಟ್‌ಬಾಟ್ ವಿವಾದ: ಗ್ರೋಕ್ ನಿಷೇಧಕ್ಕೆ ಕೇಂದ್ರದ ನಿರ್ಧಾರ ಸಾಧ್ಯತೆ!

Date:

ನವದೆಹಲಿ: ಎಲಾನ್ ಮಸ್ಕ್ ಅವರ XAI ಕಂಪನಿಯ “ಗ್ರೋಕ್” ಎಐ ಚಾಟ್‌ಬಾಟ್ ಭಾರತದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಖಾರ ಭಾಷೆ, ಅಸಭ್ಯ ಪದಪ್ರಯೋಗ ಹಾಗೂ ರಾಜಕೀಯ ನಾಯಕರು, ಸರ್ಕಾರದ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಂದ ಈ ಚಾಟ್‌ಬಾಟ್ ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದ್ದು, ಭಾರತದಲ್ಲಿ ನಿಷೇಧ ಸಾಧ್ಯತೆ ಎದುರಿಸುತ್ತಿದೆ.

ರಾಜಕೀಯ ಅಸಮಾಧಾನ ಮತ್ತು ವಿವಾದ:
ಗ್ರೋಕ್ ಚಾಟ್‌ಬಾಟ್ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಮತ್ತು ಹಲವು ರಾಜಕೀಯ ಮುಖಂಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಈ ಏಐ ಮೋದಿಯವರ ಸಂದರ್ಶನಗಳು ಸ್ಕ್ರಿಪ್ಟೆಡ್ ಆಗಿವೆ ಎಂದು ಹೇಳಿದರೆ, ರಾಹುಲ್ ಗಾಂಧಿ ಹೆಚ್ಚು ಪ್ರಾಮಾಣಿಕರು, ಉತ್ತಮ ಶಿಕ್ಷಣ ಹೊಂದಿದ್ದಾರೆ ಎಂದು ಬಣ್ಣಿಸಿದೆ. ಈ ಹೇಳಿಕೆ BJP ನಾಯಕರ ಆಕ್ರೋಶ ಮೂಡಿಸಿದೆ.

ಕೇಂದ್ರ ಸರ್ಕಾರದ ಕ್ರಮ:
ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ಕೇಂದ್ರ ಸರ್ಕಾರ ಗ್ರೋಕ್ ಅನ್ನು ನಿಷೇಧಿಸುವ ಸಾಧ್ಯತೆ ಇದೆ. ಭಾರತ ಸರ್ಕಾರ ಐಟಿ ಕಾಯ್ದೆಯ ಸೆಕ್ಷನ್ 79(3)(B)ಯನ್ನು ಪ್ರಶ್ನಿಸುತ್ತಿದ್ದು, ಈ ನಿಯಮ ಅನಿಯಂತ್ರಿತ ಸೆನ್ಸಾರ್‌ಶಿಪ್ ಗೆ ಕಾರಣವಾಗುತ್ತಿದೆ ಎಂದು ಎಲಾನ್ ಮಸ್ಕ್ ಅವರ XAI ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಎಲಾನ್ ಮಸ್ಕ್ ಪ್ರತಿಕ್ರಿಯೆ:
ಈ ವಿವಾದದ ಬಗ್ಗೆ BBC ವರದಿ ಪ್ರಕಟವಾಗುತ್ತಿದ್ದಂತೆ, ಮಸ್ಕ್ ನಗುವ ಎಮೋಜಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಪ್ರತಿಕ್ರಿಯೆ ವೈರಲ್ ಆಗಿದ್ದು, ನೆಟ್ಟಿಗರು ಮಸ್ಕ್‌ನ್ನು ‘ಗಾಸಿಪ್ ಮಾಡುವ ಚಿಕ್ಕಮ್ಮ’ ಎಂದು ತಮಾಷೆ ಮಾಡುತ್ತಿದ್ದಾರೆ.

ಅಮೆರಿಕದಲ್ಲಿ ಭಾರೀ ದೋಷ:
ಅಮೆರಿಕದಲ್ಲಿ ಗ್ರೋಕ್ 3 ಬಳಕೆದಾರರ ಪ್ರಶ್ನೆಗಳಿಗೆ ವಿವಾದಾತ್ಮಕ ಉತ್ತರ ನೀಡಿದೆ. ಕೆಲವು ಸಂದರ್ಭಗಳಲ್ಲಿ ಪ್ರಚೋದನಕಾರಿ ಉತ್ತರ ನೀಡಿ, ತಪ್ಪು ಮಾಹಿತಿಯನ್ನು ಹರಡಿರುವುದು ದಾಖಲಾಗಿದೆ. AI ಚಾಟ್‌ಬಾಟ್‌ಗಳು ಹಾನಿಕಾರಕ ಸಲಹೆ ನೀಡಿದ ಘಟನೆಗಳು ಇನ್ನಷ್ಟು ಚರ್ಚೆಗೆ ಗ್ರಾಸವಾಗಿವೆ.

ಭಾರತದಲ್ಲಿ AI ನಿಯಂತ್ರಣ ಕಾನೂನುಗಳು ಕಠಿಣಗೊಳ್ಳುತ್ತಿವೆಯೇ? ಈ ವಿವಾದದ ನಂತರ ಭಾರತದಲ್ಲಿ AI ನಿಯಂತ್ರಣ ಮತ್ತಷ್ಟು ಗಟ್ಟಿಯಾಗಬಹುದೆಂಬ ಸಾಧ್ಯತೆ ಎದುರಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.