ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿ

Date:

spot_img
daya

ಮುಂಬೈ: ಮುಂಬೈ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಸಂಚಲನ ಮೂಡಿಸಿದ್ದ, ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರು ಮೂವತ್ತು ವರ್ಷಗಳ ಅದ್ಭುತ ಸೇವೆಯ ನಂತರ ಈ ತಿಂಗಳ ಅಂತ್ಯಕ್ಕೆ ವೃತ್ತಿಯಿಂದ ನಿವೃತ್ತರಾಗಲಿದ್ದಾರೆ.

1995ರಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರ್ಪಡೆಗೊಂಡಿದ್ದ ದಯಾ ನಾಯಕ್, ಇದೀಗ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ (ACP) ಹುದ್ದೆಯಿಂದ ಬೀಳ್ಕೊಡಲಿದ್ದಾರೆ. ಮುಂಬೈ ಅಂಡರ್‌ವರ್ಲ್ಡ್‌ನ ಪಾಪಿಗಳಿಗೆ ಪೊಲೀಸ್ ಶಕ್ತಿ ಏನೆಂದು ತೋರಿಸಿಕೊಟ್ಟ ದಯಾ ನಾಯಕ್, “ಮುಂಬೈನಲ್ಲಿ ಇನ್ನು ಗ್ಯಾಂಗ್‌ಸ್ಟರ್‌ಗಳ ಆಳ್ವಿಕೆ ನಡೆಯುವುದಿಲ್ಲ” ಎಂಬುದನ್ನು ತಮ್ಮ ಕಾರ್ಯಗಳಿಂದಲೇ ಸಾಬೀತುಪಡಿಸಿದ್ದರು.

85ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು: ಲಷ್ಕರ್-ಎ-ತೋಯ್ಬಾ ಭಯೋತ್ಪಾದಕ ಸಂಘಟನೆಯ ಸದಸ್ಯರು ಸೇರಿದಂತೆ, ಕುಖ್ಯಾತ ಗ್ಯಾಂಗ್‌ಸ್ಟರ್‌ಗಳಾದ ದಾವೂದ್ ಇಬ್ರಾಹಿಂ, ಛೋಟಾ ಶಕೀಲ್, ಚೋಟಾ ರಾಜನ್, ಅಬು ಸಲೇಂ, ಅರುಣ್ ಗೌಳಿ, ರವಿ ಪೂಜಾರಿ ಗ್ಯಾಂಗ್‌ಗಳಿಗೆ ಸೇರಿದ ಸುಮಾರು 85 ಜನರನ್ನು ಎನ್‌ಕೌಂಟರ್ ಮಾಡುವ ಮೂಲಕ ದಯಾ ನಾಯಕ್ ದೇಶಾದ್ಯಂತ ಸುದ್ದಿಯಾಗಿದ್ದರು.

ಸಾಮಾಜಿಕ ಕಾರ್ಯ ಮತ್ತು ಸಮರ್ಪಣೆ: ಹುಟ್ಟೂರು ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಿದ ದಯಾ ನಾಯಕ್, ಸಾವಿರಾರು ಮಕ್ಕಳ ಭವಿಷ್ಯ ರೂಪಿಸಲು ನೆರವಾಗಿದ್ದಾರೆ. ವೃತ್ತಿ ಜೀವನದ ಆರಂಭದಿಂದಲೂ ತಮ್ಮದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡು ಬಂದಿದ್ದ ಅವರು, ಭಾರತದ ಅತ್ಯುನ್ನತ ಬೇಹುಗಾರಿಕಾ ಸಂಸ್ಥೆ ‘ರಾ’ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಕಾರ್ಯಾಚರಣೆಗಳಿಗೂ ಸಹಕಾರ ನೀಡಿದ್ದಾರೆ. ವೃತ್ತಿಜೀವನದಲ್ಲಿ ಎದುರಾದ ಸೋಲು ಮತ್ತು ಅವಮಾನಗಳನ್ನು ಲೆಕ್ಕಿಸದೆ, ಅವರು ವಿಜಯದ ಪಥದಲ್ಲಿ ಸಾಗಿದರು. ಕೊಟ್ಟ ಮಾತಿಗೆ ತಪ್ಪದೆ, ಇಟ್ಟ ಹೆಜ್ಜೆಯಿಂದ ಎಂದಿಗೂ ಹಿಂದೆ ಸರಿದವರಲ್ಲ ಎಂದು ಅವರ ಬಗ್ಗೆ ಹೇಳಲಾಗುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ