ಪಂಚನಬೆಟ್ಟು ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಗೆ ಪ್ರೇರಣೆ

Date:

spot_img

ಹಿರಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ಹಿರಿಯಡ್ಕ ವಲಯ ಮತ್ತು ಪಂಚನಬೆಟ್ಟು ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಕಾರ್ಯಕ್ರಮವನ್ನು ಶ್ರೀ ವಾಸುದೇವ ಭಟ್ ನೆಕ್ಕರಪಲ್ಕೆ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಶ್ರೀಯುತ ಸುರೇಂದ್ರ ನಾಯ್ಕ್ (ಮಾನ್ಯ ಯೋಜನಾಧಿಕಾರಿ, ಧರ್ಮಸ್ಥಳ ಯೋಜನೆ – ಉಡುಪಿ)ಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಲಯದ ಅಧ್ಯಕ್ಷ ಗಣೇಶ್ ನಾಯ್ಕ್ ಗಿಡ ನಾಟಿ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರಾಯೋಗಿಕವಾಗಿ ಮಾದರಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ವಲಯದ ಸಾಮಾಜಿಕ ಅರಣ್ಯಾಧಿಕಾರಿ ಶ್ರೀಮತಿ ಅನುಷಾ ಭಟ್ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಸಂರಕ್ಷಣೆಯ ಕುರಿತು ಪ್ರಭಾವಶಾಲಿ ಮಾಹಿತಿ ನೀಡಿದರು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ , ಟ್ರಸ್ಟ್ ಕಾರ್ಯದರ್ಶಿ ಸಂತೋಷ್ ಕಾಮತ್, ಶಾಲಾ ಆಡಳಿತ ಮಂಡಳಿಯ ವಿಶ್ವನಾಥ್ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶೇಷವಾಗಿ, ಶಾಲೆಗೆ ಅಗತ್ಯವಾಗಿದ್ದ ಸೌಂಡ್ ಸಿಸ್ಟಮ್ ಅನ್ನು ಶ್ರೀಮತಿ ರಾಧಾ ಎಚ್. ಪುರಾಣಿಕ್ (ಕಾರ್ಕಳ)ರವರು ದೇಣಿಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯಡ್ಕ ವಲಯ ಮೇಲ್ವಿಚಾರಕರಾದ ರಾಜ್ ಸರ್ ನೆರವೇರಿಸಿದರು ಮತ್ತು ಕೃಷಿ ಮೇಲ್ವಿಚಾರಕರಾದ ಮಂಜುನಾಥ್ ಸ್ವಾಗತ ಭಾಷಣ ಮಾಡಿದರು . ಕೊನೆಗೆ ಶಾಲಾ ಕಾರ್ಯನಿರ್ವಾಹಕ ನರಸಿಂಹ ನಾಯಕ್ ಧನ್ಯವಾದ ಸಲ್ಲಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.