spot_img

ಯುವಕರ ಹಠಾತ್ ಸಾವಿಗೆ ಸಂಬಂಧಿಸಿದಂತೆ ತಜ್ಞ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ ಆದೇಶ!

Date:

ಉಡುಪಿ: ರಾಜ್ಯದಲ್ಲಿ ಯುವಕರ ಹಠಾತ್ ಸಾವಿನ ಪ್ರಮಾಣದ ಹೆಚ್ಚಳವನ್ನು ಗಮನಕ್ಕೆ ತಂದ ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರು ಅವರ ಪತ್ರದ ಮೇರೆಗೆ, ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಲು ಆದೇಶ ನೀಡಿದ್ದಾರೆ.

ಈ ಸಮಿತಿಯನ್ನು ರಚಿಸಿ, ಹಠಾತ್ ಸಾವುಗಳು ಹೃದಯಾಘಾತ, ಹೃದಯಸ್ತಂಭನ, ಮೆದುಳು ಹಾಗೂ ನರ ಸಂಬಂಧಿ ಸಮಸ್ಯೆಗಳಿಂದ ಸಂಭವಿಸುತ್ತಿರುವುದನ್ನು ಅಧ್ಯಯನ ಮಾಡಲು ಮತ್ತು ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ರಾಜಾರಾಮ್ ತಲ್ಲೂರು ಅವರು ತಮ್ಮ ಇ-ಮೇಲ್ ಮೂಲಕ, ಇತ್ತೀಚೆಗೆ ರಾಜ್ಯದಲ್ಲಿ ಈ ರೀತಿಯ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಅರಿವು ಮೂಡಿಸಿದ್ದಾರೆ ಮತ್ತು ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ತಿಳಿಸಿದ್ದಾರೆ.

ಕೋವಿಡ್-19 ಅಥವಾ ಲಸಿಕೆಯಿಂದ ಇವು ಸಂಬಂಧಿತವಾಗಿರಬಹುದೆಂಬ ಚರ್ಚೆ ನಡೆಯುತ್ತಿದ್ದು, ಇದರ ಕುರಿತು ಸಮಗ್ರ ಅಧ್ಯಯನ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂದಿರಾನಗರದಲ್ಲಿ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ

ಹೆಬ್ರಿ ಇಂದಿರಾನಗರದಲ್ಲಿರುವ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 20, 2025, ಮಂಗಳವಾರ ರಾತ್ರಿ 9 ಗಂಟೆಗೆ ಶ್ರೀ ಸ್ವಾಮಿ ಕೊರಗಜ್ಜನ ದ್ವಿತೀಯ ವರ್ಷದ ಕೋಲ ಸೇವೆ ಜರಗಲಿದೆ.

ಎಲೆಕೋಸು ಸೇವನೆಯಿಂದ ದೇಹದ ಆರೋಗ್ಯಕ್ಕೆ 11 ಅದ್ಭುತ ಪ್ರಯೋಜನಗಳು!

ನಿತ್ಯ ಆಹಾರದಲ್ಲಿ ಸೇರಿಸಿದರೆ ದೇಹಕ್ಕೆ ಅಸಂಖ್ಯಾತ ಲಾಭಗಳನ್ನು ತಂದುಕೊಡಬಲ್ಲ ಎಲೆಕೋಸಿನ ಆರೋಗ್ಯ ಪ್ರಯೋಜನಗಳು

ಭದ್ರತೆ ದೃಷ್ಟಿಯಿಂದ ಮೀನುಗಾರರಿಗೆ ಗುಂಪುಗಳಲ್ಲಿ ಮೀನುಗಾರಿಕೆ ನಡೆಸಲು ಸೂಚನೆ ನೀಡಿದ ಮೀನುಗಾರಿಕಾ ಇಲಾಖೆ

ಕರಾವಳಿ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ, ಸಮುದ್ರದಲ್ಲಿ ಮೀನುಗಾರರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕೆಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಸೂಚನೆ ನೀಡಿದ್ದಾರೆ.

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ ! ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ

ಭಾರತ - ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ನಡೆದ ಬಾಂಬ್ ಸ್ಫೋಟದಂತಹ ಘಟನೆ ಕ್ಷಣಾಂತರದಲ್ಲಿ ಜನರಲ್ಲಿ ಆತಂಕ ಉಂಟುಮಾಡಿದೆ.