
ಬಂಟ್ವಾಳ: ಫರಂಗಿಪೇಟೆಯ ಕಿದೆಬೆಟ್ಟು ಪ್ರದೇಶದ ವಿದ್ಯಾರ್ಥಿ ದಿಗಂತ್, 10 ದಿನಗಳ ನಿಗೂಢ ನಾಪತ್ತಿಯ ಬಳಿಕ ಶನಿವಾರ (ಮಾರ್ಚ್. 8) ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಪೋಲೀಸರು ಈಗ ಆತನನ್ನು ಕರೆತರುತ್ತಿದ್ದಾರೆ ಎಂದು ವರದಿ ಬಂದಿದೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, 40ಕ್ಕೂ ಹೆಚ್ಚು ಪೊಲೀಸರ ತಂಡ ಹುಡುಕಾಟ ನಡೆಸಿತ್ತು. ಡಿಎಆರ್ ವಿಶೇಷ ಪಡೆ, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾ ಮುಂತಾದವುಗಳನ್ನು ಬಳಸಿಕೊಂಡು ವ್ಯಾಪಕ ಶೋಧ ಕಾರ್ಯ ನಡೆಸಲಾಗಿತ್ತು.