spot_img

ಹಾಡಹಗಲೇ ಕಾರ್ಕಳದಲ್ಲಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ!

Date:

spot_img

ಕಾರ್ಕಳ: ಫೆಬ್ರವರಿ 3ರ ಮಧ್ಯಾಹ್ನ ಕಾರ್ಕಳ ಶಿವತಿಕೆರೆಯ ನಡುಬೀದಿಯಲ್ಲೇ ನಡೆದ ಮಾರಣಾಂತಿಕ ಹಲ್ಲೆ ಜನರಲ್ಲಿ ಆತಂಕ ಮೂಡಿಸಿದೆ. ಜೋಡುರಸ್ತೆ ನಿವಾಸಿ ಮಹಮ್ಮದ್‌ ರಿಜ್ವಾನ್‌ ಅವರನ್ನು ಆತನ ಪತ್ನಿಯ ಅಣ್ಣ ಅಶ್ರಫ್‌ ರೆಂಜಾಳ ಕತ್ತಿಯಿಂದ ಕಡಿದು ತಲೆ, ಕುತ್ತಿಗೆ ಮತ್ತು ಕಾಲಿಗೆ ಗಂಭೀರ ಗಾಯಗೊಳಿಸಿದ್ದಾನೆ. ರಿಜ್ವಾನ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಶ್ರಫ್‌ ರಿಜ್ವಾನ್‌ ಅವರನ್ನು ಕಾರ್ಕಳ ಬೈಪಾಸ್‌ ರಸ್ತೆಯ ಶಿವತಿಕೆರೆಗೆ ಕರೆಸಿಕೊಂಡು, ಕಾರಿನಿಂದ ಇಳಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಗಾಯಾಳುವನ್ನು ಆಟೋದಲ್ಲಿ ಕುಳ್ಳಿರಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

ತಂಗಿಯ ಆತ್ಮಹತ್ಯೆ ಹಿನ್ನೆಲೆಯೇ ಹಲ್ಲೆ?
2017ರಲ್ಲಿ ಅಶ್ರಫ್‌ನ ತಂಗಿ ಮೈಮುನಾ, ಜೋಡುರಸ್ತೆಯ ಮಹಮ್ಮದ್‌ ರಿಜ್ವಾನ್‌ ಅವರನ್ನು ಮದುವೆಯಾಗಿದ್ದರು. ಆದರೆ ಗಂಡನ ಮನೆಯವರ ಹಿಂಸೆ ಮತ್ತು ಕಿರುಕುಳ ತಾಳಲಾರದೇ ಕಳೆದ ನವೆಂಬರ್ 28ರಂದು ಮೈಮುನಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಡಿಸೆಂಬರ್ 2ರಂದು ಅವರು ಮೃತಪಟ್ಟಿದ್ದರು.

ಮೈಮುನಾ ಸಾವಿಗೆ ಸಂಬಂಧಿಸಿ ಅತ್ತೆ ನೂರ್‌ಜಾನ್‌, ಮಾವ ಮೊಹಮ್ಮದ್‌ ಶರೀಪ್‌, ಸಿರಾಜ್‌, ಸಿರಾಜ್‌ನ ಹೆಂಡತಿ ರಫಾತ್‌, ಅಬ್ದುಲ್‌ ಖಾದರ್‌, ಮಜೀದ್‌, ಮೆಹರುನ್ನಿಸಾ ಮತ್ತು ದಿಲ್‌ಷಾದ್‌ ಎಂಬವರು ಮಾನಸಿಕ ಹಿಂಸೆ ನೀಡಿದ ಕುರಿತು ಮೈಮುನಾ ಅಕ್ಕ ರಶೀದಾ ಬಾನು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ