spot_img

ಹಾಡಹಗಲೇ ಕಾರ್ಕಳದಲ್ಲಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ!

Date:

ಕಾರ್ಕಳ: ಫೆಬ್ರವರಿ 3ರ ಮಧ್ಯಾಹ್ನ ಕಾರ್ಕಳ ಶಿವತಿಕೆರೆಯ ನಡುಬೀದಿಯಲ್ಲೇ ನಡೆದ ಮಾರಣಾಂತಿಕ ಹಲ್ಲೆ ಜನರಲ್ಲಿ ಆತಂಕ ಮೂಡಿಸಿದೆ. ಜೋಡುರಸ್ತೆ ನಿವಾಸಿ ಮಹಮ್ಮದ್‌ ರಿಜ್ವಾನ್‌ ಅವರನ್ನು ಆತನ ಪತ್ನಿಯ ಅಣ್ಣ ಅಶ್ರಫ್‌ ರೆಂಜಾಳ ಕತ್ತಿಯಿಂದ ಕಡಿದು ತಲೆ, ಕುತ್ತಿಗೆ ಮತ್ತು ಕಾಲಿಗೆ ಗಂಭೀರ ಗಾಯಗೊಳಿಸಿದ್ದಾನೆ. ರಿಜ್ವಾನ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಶ್ರಫ್‌ ರಿಜ್ವಾನ್‌ ಅವರನ್ನು ಕಾರ್ಕಳ ಬೈಪಾಸ್‌ ರಸ್ತೆಯ ಶಿವತಿಕೆರೆಗೆ ಕರೆಸಿಕೊಂಡು, ಕಾರಿನಿಂದ ಇಳಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಗಾಯಾಳುವನ್ನು ಆಟೋದಲ್ಲಿ ಕುಳ್ಳಿರಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

ತಂಗಿಯ ಆತ್ಮಹತ್ಯೆ ಹಿನ್ನೆಲೆಯೇ ಹಲ್ಲೆ?
2017ರಲ್ಲಿ ಅಶ್ರಫ್‌ನ ತಂಗಿ ಮೈಮುನಾ, ಜೋಡುರಸ್ತೆಯ ಮಹಮ್ಮದ್‌ ರಿಜ್ವಾನ್‌ ಅವರನ್ನು ಮದುವೆಯಾಗಿದ್ದರು. ಆದರೆ ಗಂಡನ ಮನೆಯವರ ಹಿಂಸೆ ಮತ್ತು ಕಿರುಕುಳ ತಾಳಲಾರದೇ ಕಳೆದ ನವೆಂಬರ್ 28ರಂದು ಮೈಮುನಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಡಿಸೆಂಬರ್ 2ರಂದು ಅವರು ಮೃತಪಟ್ಟಿದ್ದರು.

ಮೈಮುನಾ ಸಾವಿಗೆ ಸಂಬಂಧಿಸಿ ಅತ್ತೆ ನೂರ್‌ಜಾನ್‌, ಮಾವ ಮೊಹಮ್ಮದ್‌ ಶರೀಪ್‌, ಸಿರಾಜ್‌, ಸಿರಾಜ್‌ನ ಹೆಂಡತಿ ರಫಾತ್‌, ಅಬ್ದುಲ್‌ ಖಾದರ್‌, ಮಜೀದ್‌, ಮೆಹರುನ್ನಿಸಾ ಮತ್ತು ದಿಲ್‌ಷಾದ್‌ ಎಂಬವರು ಮಾನಸಿಕ ಹಿಂಸೆ ನೀಡಿದ ಕುರಿತು ಮೈಮುನಾ ಅಕ್ಕ ರಶೀದಾ ಬಾನು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ