spot_img

ಮೀನು ಕಳವು ಆರೋಪ ಪ್ರಕರಣ: ಜೈಲಿನಲ್ಲಿರುವ ಐವರನ್ನು ಭೇಟಿಯಾದ ಶಾಸಕ ಯಶಪಾಲ್ ಸುವರ್ಣ!

Date:

spot_img

ಮಲ್ಪೆ: ಉಡುಪಿಯ ಮಲ್ಪೆಯಲ್ಲಿ ಮೀನು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜೈಲಿನಲ್ಲಿ ಬಂಧಿತರಾಗಿರುವ ಐವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿದರು. ಅವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಸಕರು ಬಂಧಿತರೊಂದಿಗೆ ಮಾತುಕತೆ ನಡೆಸಿ, ಅವರ ಸ್ಥಿತಿಗತಿಗಳನ್ನು ಕುರಿತು ಅವಲೋಕನೆ ಮಾಡಿದರು. ಬಳಿಕ ಮಾತನಾಡಿದ ಯಶಪಾಲ್ ಸುವರ್ಣ, “ಕರಾವಳಿಯ ಪೊಲೀಸ್ ಇಲಾಖೆ ಕಾಂಗ್ರೆಸ್ ಕಚೇರಿಯಂತೆ ಕಾರ್ಯನಿರ್ವಹಿಸುತ್ತಿದೆ. ದುಡಿದು ತಿನ್ನುವವರ ಮೇಲೆ ಈ ರೀತಿ ಅನ್ಯಾಯ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಮಹಿಳೆಯರು ಸಹ ಪುರುಷರಂತೆ ಮೀನುಗಾರಿಕೆ ಮಾಡುತ್ತಿದ್ದಾರೆ. ಆದರೆ, ಪೊಲೀಸರ ವರ್ತನೆಯು ನಿರಾಸೆ ಮೂಡಿಸಿದೆ. ಅವರು ತಕ್ಕ ಉತ್ತರ ಪಡೆಯಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದರು.

“ನಾನು ಶಾಸಕರಾಗಿ, ಮೀನುಗಾರನಾಗಿ ನನ್ನ ಜನರೊಂದಿಗೆ ನಿಲ್ಲುತ್ತೇನೆ. ಕಾಂಗ್ರೆಸ್ ಉಡುಪಿ-ಮಂಗಳೂರಿನಲ್ಲಿ ಯಾವುದೇ ಸಾಧನೆ ಮಾಡಲಾಗದು, ಅದಕ್ಕಾಗಿ ಸುಳ್ಳು ಕೇಸ್ ಗಳನ್ನು ದಾಖಲಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇವೆ” ಎಂದು ಅವರು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ