
ಮಲ್ಪೆ: ಉಡುಪಿಯ ಮಲ್ಪೆಯಲ್ಲಿ ಮೀನು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜೈಲಿನಲ್ಲಿ ಬಂಧಿತರಾಗಿರುವ ಐವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿದರು. ಅವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕರು ಬಂಧಿತರೊಂದಿಗೆ ಮಾತುಕತೆ ನಡೆಸಿ, ಅವರ ಸ್ಥಿತಿಗತಿಗಳನ್ನು ಕುರಿತು ಅವಲೋಕನೆ ಮಾಡಿದರು. ಬಳಿಕ ಮಾತನಾಡಿದ ಯಶಪಾಲ್ ಸುವರ್ಣ, “ಕರಾವಳಿಯ ಪೊಲೀಸ್ ಇಲಾಖೆ ಕಾಂಗ್ರೆಸ್ ಕಚೇರಿಯಂತೆ ಕಾರ್ಯನಿರ್ವಹಿಸುತ್ತಿದೆ. ದುಡಿದು ತಿನ್ನುವವರ ಮೇಲೆ ಈ ರೀತಿ ಅನ್ಯಾಯ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಮಹಿಳೆಯರು ಸಹ ಪುರುಷರಂತೆ ಮೀನುಗಾರಿಕೆ ಮಾಡುತ್ತಿದ್ದಾರೆ. ಆದರೆ, ಪೊಲೀಸರ ವರ್ತನೆಯು ನಿರಾಸೆ ಮೂಡಿಸಿದೆ. ಅವರು ತಕ್ಕ ಉತ್ತರ ಪಡೆಯಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದರು.
“ನಾನು ಶಾಸಕರಾಗಿ, ಮೀನುಗಾರನಾಗಿ ನನ್ನ ಜನರೊಂದಿಗೆ ನಿಲ್ಲುತ್ತೇನೆ. ಕಾಂಗ್ರೆಸ್ ಉಡುಪಿ-ಮಂಗಳೂರಿನಲ್ಲಿ ಯಾವುದೇ ಸಾಧನೆ ಮಾಡಲಾಗದು, ಅದಕ್ಕಾಗಿ ಸುಳ್ಳು ಕೇಸ್ ಗಳನ್ನು ದಾಖಲಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇವೆ” ಎಂದು ಅವರು ಹೇಳಿದರು.