
ಮಂಗಳೂರು, ಮಾರ್ಚ್.7 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆಹಾರ ವಿಷಬಾಧೆಯಿಂದ 30ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಹೊಟ್ಟೆ ನೋವು, ವಾಂತಿ, ಮತ್ತು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೈದಿಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೈದಿಗಳು ತಾವು ಆಸ್ಪತ್ರೆಗೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದು, ಆಕ್ರೋಶಗೊಂಡಿದ್ದರು. ಈ ವೇಳೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ವೆನ್ಸಾಕ್ ಆಸ್ಪತ್ರೆಗೆ ಅಸ್ವಸ್ಥ ಕೈದಿಗಳನ್ನು ದಾಖಲಿಸಿದ್ದಾರೆ.
ಅಸ್ವಸ್ಥರಾಗಿದ್ದ ಕೈದಿಗಳನ್ನು ಇತರ ಕೈದಿಗಳು ತಾವೇ ಹೊತ್ತು ಆಸ್ಪತ್ರೆಗೆ ಸಾಗಿಸಿದ ದೃಶ್ಯ ಗಂಭೀರತೆಯನ್ನು ತೋರಿಸುತ್ತದೆ. ಘಟನೆಗೆ ಕಾರಣವಾದ ಆಹಾರವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.