spot_img

ಮಲ್ಪೆಯಲ್ಲಿ ವಿದೇಶಿ ಮೀನುಗಾರಿಕಾ ಬೋಟ್ ಪತ್ತೆ: ಓಮನ್‌ನಿಂದ ತಪ್ಪಿಸಿಕೊಂಡ ಮೂರು ತಮಿಳುನಾಡು ಮೀನುಗಾರರು

Date:

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಸೈಂಟ್ ಮೇರಿಸ್ ದ್ವೀಪದ ಬಳಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದೆ. ಈ ಬೋಟ್‌ನಲ್ಲಿ ತಮಿಳುನಾಡು ಮೂಲದ ಮೂವರು ಮೀನುಗಾರರು ಸಿಕ್ಕಿದ್ದು, ಅವರು ತಮ್ಮ ಜೀವದ ಭಯದಿಂದ ಓಮನ್ ಹಾರ್ಬಾರ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.

ಈ ಮೀನುಗಾರರು ಓಮನ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದರು. ಆದರೆ ಬೋಟ್ ಮಾಲೀಕರು ಅವರಿಗೆ ವೇತನ ನೀಡದೆ, ಆಹಾರವೂ ಸರಿಯಾಗಿ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದುದರಿಂದ ಅವರು ದೇಶ ತೊರೆದು ಓಡಿಬಂದಿದ್ದಾರೆ. ಬೋಟ್ ಮಾಲೀಕರು ಅವರ ಪಾಸ್‌ಪೋರ್ಟ್ ವಶಕ್ಕೆ ಪಡೆದಿದ್ದರಿಂದ ಅವರು ಅಧಿಕೃತವಾಗಿ ಮರಳಲು ಸಾಧ್ಯವಾಗದೆ, ಸಮುದ್ರ ಮಾರ್ಗವಾಗಿ 4,000 ಕಿಲೋಮೀಟರ್ ಪ್ರಯಾಣಿಸಿ ಭಾರತೀಯ ಕರಾವಳಿಗೆ ತಲುಪಿದ್ದಾರೆ.

ಕೋಸ್ಟ್ ಗಾರ್ಡ್ ಮಾಹಿತಿಯಂತೆ, ಈ ಬೋಟ್ ಕಾರವಾರವನ್ನು ದಾಟಿ ಮಲ್ಪೆ ಕಡೆಗೆ ಬರುತ್ತಿತ್ತು. ಆದರೆ ಡೀಸೆಲ್ ಖಾಲಿಯಾಗಿದ್ದು, ಅವರಿಗೆ ಹಣವೂ ಇಲ್ಲದ ಕಾರಣ ಅಲ್ಲಿ ಪರದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಬೋಟ್ ಮತ್ತು ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಸ್ತುತ, ಪಾಸ್‌ಪೋರ್ಟ್ ಇಲ್ಲದೆ ವಿದೇಶಿ ಬೋಟ್ ಮೂಲಕ ಗಡಿ ದಾಟಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನುಳಿದ ತನಿಖೆ ಮುಂದುವರಿಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.