spot_img

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

Date:

ಪಟನಾ: ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ. ತೇಜಸ್ವಿ ಯಾದವ್ ಅವರು ತಮ್ಮ ಜಾತಿಯವರನ್ನು ಮದುವೆಯಾಗದೇ ಹೋದದ್ದಕ್ಕೆ ಟೀಕಿಸಿದ ರಾಜ್ ಬಲ್ಲಭ್, “ಅವರು ಹರಿಯಾಣ-ಪಂಜಾಬ್‌ನಿಂದ ಜೆರ್ಸಿ ಹಸುವನ್ನು ಕರೆತಂದಿದ್ದಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಆರ್‌ಜೆಡಿಯಿಂದ ತೀವ್ರ ಆಕ್ರೋಶ

ಮಾಜಿ ಶಾಸಕರ ಈ ಹೇಳಿಕೆಗೆ ಆರ್‌ಜೆಡಿ ನಾಯಕ ಕೌಶಲ್ ಯಾದವ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ತೇಜಸ್ವಿ ಅವರ ಪತ್ನಿಯ ಬಗ್ಗೆ ವೈಯಕ್ತಿಕ ಟೀಕೆ ಮಾಡುವ ಮೂಲಕ ರಾಜ್ ಬಲ್ಲಭ್ ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಈ ಹೇಳಿಕೆ ಕೇವಲ ತೇಜಸ್ವಿ ಅವರ ಪತ್ನಿಗೆ ಮಾತ್ರವಲ್ಲ, ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಈ ವ್ಯಕ್ತಿಯನ್ನು ಮತ್ತೆ ಜೈಲಿಗೆ ಕಳುಹಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ತೇಜಸ್ವಿ ಯಾದವ್ ಮತ್ತು ರಾಜ್‌ಶ್ರೀ ವಿವಾಹದ ಹಿನ್ನಲೆ

ತೇಜಸ್ವಿ ಯಾದವ್ ಅವರು ತಮ್ಮ ಬ್ಯಾಚ್‌ಮೇಟ್ ರಾಚೆಲ್ ಕೊಡಿನ್ಹೋ ಅವರನ್ನು 2021 ರಲ್ಲಿ ವಿವಾಹವಾಗಿದ್ದಾರೆ. ಮೂಲತಃ ಹರಿಯಾಣದವರಾದ ರಾಚೆಲ್ ಅವರು ವಿವಾಹದ ನಂತರ ತಮ್ಮ ಹೆಸರನ್ನು ರಾಜಶ್ರೀ ಯಾದವ್ ಎಂದು ಬದಲಾಯಿಸಿಕೊಂಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್, ಹತ್ತು ವರ್ಷಗಳ ಹಿಂದೆ ಕುರ್ಮಿ ಸಮುದಾಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈಲು ಸೇರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.