spot_img

7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಐತಿಹಾಸಿಕ ಪೆರ್ಡೂರು ದೇವಳದ ನಗಾರಿ ಗೋಪುರಕ್ಕೆ ಶಿಲಾನ್ಯಾಸ

Date:

ಹೆಬ್ರಿ : ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಸರದಿ ಅರ್ಚಕರಾದ ಪಿ. ಸುಧಾಕರ ಅಡಿಗರ ಉಪಸ್ಥಿತಿಯಲ್ಲಿ ಈ ಶುಭ ಕಾರ್ಯ ನೆರವೇರಲಿದೆ.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ದಾರು ಮುಹೂರ್ತ, ಶಿಲಾ ಮುಹೂರ್ತ, ನಗಾರಿ ಭುವನೇಶ್ವರೀ ಪೂಜೆ, ಗೋಪುರದ ಶಿಲಾ ಪ್ರತಿಷ್ಠಾಪನೆ, ಶ್ರೀ ದೇವರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿವೆ. ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ದೇವರ ಅನಂತ ದೀಕ್ಷಾ ವಿಧಿ ನಡೆಯಲಿದ್ದು, ಭಕ್ತಾದಿಗಳು ದೀಕ್ಷಾ ವಿಧಿ ಪಡೆದು ದಿನನಿತ್ಯ ಶ್ರೀ ದೇವರ ಮಂತ್ರ ಜಪವನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಮುಜರಾಯಿ ಸಚಿವರಿಂದ ಶಿಲಾನ್ಯಾಸ: ನೂತನವಾಗಿ ನಿರ್ಮಾಣಗೊಳ್ಳಲಿರುವ ನಗಾರಿ ಗೋಪುರವು ಹಳೆಯ ರೂಪುರೇಷೆಗಳಂತೆಯೇ, ತುಳುನಾಡಿನ ಸಾಂಪ್ರದಾಯಿಕ ಪಾರಂಪರಿಕ ವಾಸ್ತುವಿಗೆ ಅನುಗುಣವಾಗಿರಲಿದೆ. ಇದರ ಶಿಲಾನ್ಯಾಸವನ್ನು ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಲಿರುವರು. ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ಅವರು ಶುಭಾಶಂಸನೆಗೈಯಲಿದ್ದು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ ಅಧ್ಯಕ್ಷತೆ ವಹಿಸಲಿರುವರು.

ಈ ಸಂದರ್ಭದಲ್ಲಿ ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುರೇಶ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಕೆ. ಜಯಪ್ರಕಾಶ ಹೆಗ್ಡೆ, ಅದಾನಿ ಗ್ರೂಪ್‌ನ ಅಧ್ಯಕ್ಷ ಕಿಶೋ‌ ಆಳ್ವ, ಪೆರ್ಡೂರು ಮಾಜಿ ಮಂಡಲ ಪ್ರಧಾನ ಶಾಂತಾರಾಮ್ ಸೂಡ ಕೆ., ರಾಜ್ಯ ಧಾರ್ಮಿಕ ಪರಿಷತ್‌ನ ವಿಶೇಷ ಆಹ್ವಾನಿತ ರವಿಶಂಕರ ಶೆಟ್ಟಿ, ಸದಸ್ಯೆ ಮಲ್ಲಿಕಾ ಪಕ್ಕಳ, ವಿದ್ವಾನ್ ಅವಧಾನಿ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ದೇವಳದ ಅರ್ಚಕ ರಘುಪ್ರಸಾದ ಅಡಿಗ ಮೊದಲಾದ ಗಣ್ಯರು ಭಾಗವಹಿಸಲಿರುವರು.

ಬೆಳಗ್ಗೆ 11 ಗಂಟೆಯಿಂದ ಪೆರ್ಡೂರು ಮೇಳದ ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ ಮತ್ತು ಬಳಗದವರಿಂದ ಯಕ್ಷಗಾನ ವೈಭವ ನಡೆಯಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.