ಉಡುಪಿಯಲ್ಲಿ ಐಮೊಬೈಲ್ ಆ್ಯಪ್ ಮೂಲಕ ಮಹಿಳೆಯ ಡೆಬಿಟ್/ಕ್ರೆಡಿಟ್ ಕಾರ್ಡ್‌ನಿಂದ ₹4.31 ಲಕ್ಷ ಎಗರಿಸಿದ ವಂಚಕರು!

Date:

spot_img
cyber

ಉಡುಪಿ: ಮಹಿಳೆಯೊಬ್ಬರಿಗೆ ಕರೆ ಮಾಡಿದ ಸೈಬರ್ ವಂಚಕರು, ಅವರ ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳಿಂದ ಒಟ್ಟು ₹4,31,697 ಹಣವನ್ನು ಕಳವು ಮಾಡಿರುವ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಬೇಬಿ ಎಸ್. (55) ಅವರಿಗೆ ಗುರುವಾರ ಸಂಜೆ ‘ಐಸಿಐಸಿಐ ಕ್ರೆಡಿಟ್ ಕಾರ್ಡ್’ ಎಂಬ ಹೆಸರಿನಿಂದ ಕರೆ ಬಂದಿದೆ. ಕರೆಯನ್ನು ಸ್ವೀಕರಿಸಿದ ಸ್ವಲ್ಪ ಹೊತ್ತಿನ ಬಳಿಕ ಅವರ ಮೊಬೈಲ್‌ನಲ್ಲಿ ಸ್ವಯಂಚಾಲಿತವಾಗಿ ಅಪರಿಚಿತ ‘ಐಮೊಬೈಲ್ ಆ್ಯಪ್’ ಇನ್‌ಸ್ಟಾಲ್ ಆಗಿದೆ. ನಂತರ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎನ್ನಲಾಗಿದೆ.

ಸ್ವಲ್ಪ ಸಮಯದ ಬಳಿಕ ಪರಿಶೀಲಿಸಿದಾಗ, ಮಹಿಳೆಯ ಬ್ಯಾಂಕ್ ಖಾತೆಯಿಂದ ಕ್ರೆಡಿಟ್ ಕಾರ್ಡ್ ಮೂಲಕ ₹2,94,800 ಮತ್ತು ₹1,29,900 ಹಾಗೂ ಡೆಬಿಟ್ ಕಾರ್ಡ್ ಮೂಲಕ ₹2,000, ₹999, ₹1,999 ಮತ್ತು ₹1,999 ರಂತೆ ಒಟ್ಟು ₹4,31,697 ಹಣವು ವಂಚಕರ ಖಾತೆಗೆ ವರ್ಗಾವಣೆಯಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸೈಬರ್ ವಂಚಕರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.