ರಸ್ತೆ ಅಪಘಾತಕ್ಕೆ 1.5 ಲಕ್ಷ ರೂ.ವರೆಗೆ ಉಚಿತ ನಗದುರಹಿತ ಚಿಕಿತ್ಸೆ: ಕೇಂದ್ರ ಸರ್ಕಾರದ ಹೊಸ ಮಹತ್ವದ ಯೋಜನೆ

Date:

spot_img

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆಯ ಕೊರತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ, ಕೇಂದ್ರ ಸರಕಾರ ಮಹತ್ವದ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಅಪಘಾತದ ದಿನದಿಂದ ಆರಂಭಿಸಿ ಏಳು ದಿನಗಳವರೆಗೆ ₹1.5 ಲಕ್ಷ ಮಿತಿಯಲ್ಲಿ ನಗದುರಹಿತ ಚಿಕಿತ್ಸೆ ಲಭ್ಯವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ದೇಶದ ಯಾವುದೇ ರಸ್ತೆಯಲ್ಲಿ, ಯಾವುದೇ ರೀತಿಯ ವಾಹನದಿಂದ ಸಂಭವಿಸುವ ಅಪಘಾತಕ್ಕೂ ಈ ಯೋಜನೆ ಅನ್ವಯವಾಗಲಿದೆ. ಅಪಘಾತಕ್ಕೀಡಾದವರು ತಕ್ಷಣವೇ ಹತ್ತಿರದ ಆಯ್ದ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗೆ ಹೋಗಿ ಮುಂಗಡ ಹಣ ಪಾವತಿಸದೇ ತುರ್ತು ಚಿಕಿತ್ಸೆಯನ್ನು ಪಡೆಯಬಹುದು. ದಾಖಲಾಗುವಾಗ ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಗಾಯಗೊಂಡಿರುವ ವಾಹನ ಸವಾರರು, ಪ್ರಯಾಣಿಕರು ಅಥವಾ ಪಾದಚಾರಿಗಳು ಎಲ್ಲರೂ ಯೋಜನೆಯ ಲಾಭ ಪಡೆಯಬಹುದಾಗಿದೆ.

ಈ ಯೋಜನೆಯಡಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಔಷಧ, ಶಸ್ತ್ರಚಿಕಿತ್ಸೆ, ಐಸಿಯು ಸೌಲಭ್ಯಗಳು ಎಲ್ಲವೂ ಒಳಗೊಂಡಿವೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳು, ಎಫ್‌ಐಆರ್ ಪ್ರತಿಗಳು ಇಟ್ಟುಕೊಂಡರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯ ಎಂದು ಸಚಿವಾಲಯ ತಿಳಿಸಿದೆ.

ಈ ಯೋಜನೆಯ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಹೊತ್ತಿದ್ದು, ಪೊಲೀಸರ, ಆಸ್ಪತ್ರೆಗಳ ಹಾಗೂ ರಾಜ್ಯ ಆರೋಗ್ಯ ಸಂಸ್ಥೆಗಳ ಸಹಯೋಗದಿಂದ ಹಣವನ್ನು ನೇರವಾಗಿ ಆಸ್ಪತ್ರೆಗಳಿಗೆ ಪಾವತಿಸಲಾಗುವುದು. ಈ ಯೋಜನೆಯ ಸುಗಮ ಜಾರಿಗಾಗಿ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಹೇಳಿದೆ. 2024ರ ನವೆಂಬರ್‌ನಲ್ಲೇ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ