ಪ್ರಧಾನಿ ಮೋದಿ ಸಲಹೆಯಿಂದಲೇ ಬಿಹಾರದಲ್ಲಿ ಉಚಿತ ವಿದ್ಯುತ್: ನಿತೀಶ್ ಕುಮಾರ್ ಅಚ್ಚರಿ ಹೇಳಿಕೆ

Date:

spot_img

ಪಟ್ನಾ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಗೆ ಈಗ ಸ್ವತಃ ಮಿತ್ರಪಕ್ಷದ ಮುಖ್ಯಮಂತ್ರಿಯೊಬ್ಬರಿಂದಲೇ ಮುಜುಗರ ಎದುರಾಗಿದೆ. ಬಿಹಾರದಲ್ಲಿ ಪ್ರತಿ ತಿಂಗಳು 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸಲಹೆ ನೀಡಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಘೋಷಣೆ ಮಾಡಿದ್ದ ನಿತೀಶ್ ಕುಮಾರ್, ಆಗಸ್ಟ್ 1 ರಿಂದ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಗುರುವಾರ ಪ್ರಕಟಿಸಿದ್ದರು. ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ. “ರಾಜ್ಯದ ಜನರು ವಿದ್ಯುತ್‌ಗಾಗಿ ಹಣ ಪಾವತಿಸುವ ಅಗತ್ಯವಿಲ್ಲ. ಈ ಯೋಜನೆ ಜಾರಿಗೊಳಿಸಲು ಬೇಕಾಗಿರುವ ನೆರವನ್ನು ಪ್ರಧಾನಿ ಮೋದಿಯವರೇ ನೀಡಿದ್ದಾರೆ. ಅವರನ್ನು ನಾವು ಗೌರವಿಸುತ್ತೇವೆ. ಅವರ ಮಾರ್ಗದರ್ಶನದಲ್ಲೇ ನಾವು ಕೆಲಸ ಮಾಡುತ್ತೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಉಚಿತ ಕೊಡುಗೆಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ಎನ್‌ಡಿಎ ಹೇಳಿಕೊಂಡಿದ್ದರೂ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ‘200 ಯೂನಿಟ್ಸ್ ಉಚಿತ ವಿದ್ಯುತ್’ ಘೋಷಣೆ ಮಾಡುವ ಸಾಧ್ಯತೆಯಿದೆ. ಅದಕ್ಕೆ ಸೆಡ್ಡು ಹೊಡೆಯಲು ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.