spot_img

ಹೃದಯ ಆರೋಗ್ಯದಿಂದ ಚರ್ಮದ ಹೊಳಪಿಗೆ – ಒಣದ್ರಾಕ್ಷಿಯ ಅದ್ಭುತ ಪ್ರಯೋಜನ!

Date:

ಆರೋಗ್ಯಕರ ಜೀವನಕ್ಕೆ ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶಗಳನ್ನುಒದಗಿಸುವಂತಿರಬೇಕು. ಅದರಲ್ಲೂ ನೆನೆಸಿದ ಒಣದ್ರಾಕ್ಷಿಯು ದೇಹಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಪ್ರತಿದಿನ ರಾತ್ರಿ ನಾಲ್ಕು ರಿಂದ ಐದು ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಅದನ್ನು ಸೇವಿಸಿದರೆ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ.

ದೇಹದ ಡಿಟಾಕ್ಸ್‌ಗಾಗಿ ಒಣದ್ರಾಕ್ಷಿ:
ನಮ್ಮ ದೇಹದಲ್ಲಿ ಅನಗತ್ಯ ಜೀವಾಣುಗಳು ಹಾಗೂ ವಿಷಕಾರಿ ಪದಾರ್ಥಗಳು ಸಂಗ್ರಹವಾಗುತ್ತವೆ. ಇದು ಹಲವು ಆರೋಗ್ಯ ಸಮಸ್ಯೆಗಳ ಮೂಲವಾಗಬಹುದು. ನೆನೆಸಿದ ಒಣದ್ರಾಕ್ಷಿ ಸೇವನೆಯು ದೇಹದ ನಿರ್ವಿಷೀಕರಣಕ್ಕೆ ಸಹಾಯ ಮಾಡುತ್ತದೆ, ಹಾನಿಕಾರಕ ಟಾಕ್ಸಿನ್‌ಗಳನ್ನು ಹೊರಹಾಕುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಾಯಕ:
ಶರೀರದ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಸಾಮಾನ್ಯ ಜ್ವರ, ಶೀತ, ಕೆಮ್ಮು ಬೇಗನೆ ಹಿಡಿಯಬಹುದು. ಆದರೆ ಒಣದ್ರಾಕ್ಷಿಯಲ್ಲಿ ಇರುವ ವಿಟಮಿನ್ ಸಿ ಮತ್ತು ಬಿ ಕಾಂಪ್ಲೆಕ್ಸ್ ದೇಹದ ಪ್ರತಿರೋಧ ಶಕ್ತಿಯನ್ನು ಬಲಪಡಿಸುತ್ತದೆ ಹಾಗೂ ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ರಕ್ತಹೀನತೆಯ ವಿರುದ್ಧ ಹೋರಾಟ:
ರಕ್ತದಲ್ಲಿ ಕಬ್ಬಿಣಾಂಶದ ಕೊರತೆ ಇದ್ದರೆ ದೇಹದ ಶಕ್ತಿಯ ಮಟ್ಟ ಕಡಿಮೆಯಾಗಬಹುದು. ಈ ಸಮಸ್ಯೆಗೆ ಪರಿಹಾರವಾಗಿ, ಒಣದ್ರಾಕ್ಷಿ ಕಬ್ಬಿಣಾಂಶವನ್ನು ಒದಗಿಸಿ, ಕೆಂಪು ರಕ್ತಕಣಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ.

ಚರ್ಮದ ತೊಂದರೆಗಳಿಗೆ ಪರಿಹಾರ:
ಚರ್ಮದ ಆರೋಗ್ಯ ಕಾಪಾಡಲು ಒಣದ್ರಾಕ್ಷಿಯಲ್ಲಿ ಇರುವ ಆಂಟಿ ಆಕ್ಸಿಡೆಂಟ್‌ಗಳು ಸಹಕಾರಿ. ಇದು ಚರ್ಮವನ್ನು ಹಾನಿಯಿಂದ ರಕ್ಷಿಸಿ, ಚಳಿಗಾಲದಲ್ಲಿ ಚರ್ಮ ಒಣಗುವುದನ್ನು ತಡೆಹಿಡಿಯುತ್ತದೆ. ಜೊತೆಗೆ, ಒಣದ್ರಾಕ್ಷಿಯಲ್ಲಿರುವ ವಿಟಮಿನ್ ಎ ಮತ್ತು ಇ ಚರ್ಮವನ್ನು ಕಾಂತಿಯುತವಾಗಿರಿಸಲು ಸಹಾಯ ಮಾಡುತ್ತವೆ.

ಇನ್ನಷ್ಟು ಆರೋಗ್ಯ ಲಾಭಗಳು:

ಮೂಳೆಗಳನ್ನು ಬಲಪಡಿಸಲು ಒಣದ್ರಾಕ್ಷಿಯಲ್ಲಿರುವ ಕ್ಯಾಲ್ಸಿಯಂ ಸಹಕಾರಿ.
ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪೊಟ್ಯಾಸಿಯಮ್ ಮತ್ತು ಫೈಬರ್ ಸಹಾಯ ಮಾಡುತ್ತದೆ.
ಹೃದಯ ಆರೋಗ್ಯವನ್ನು ಉತ್ತಮವಾಗಿರಿಸಲು ಒಣದ್ರಾಕ್ಷಿಯು ನೆರವಾಗುತ್ತದೆ.
ಮಲಬದ್ಧತೆ ಸಮಸ್ಯೆ ನಿವಾರಣೆಗೆ ಉತ್ತಮ ಪರಿಹಾರ.
ನಿತ್ಯ ಆರೋಗ್ಯಕರ ಜೀವನಶೈಲಿ ಕಾಪಾಡಲು, ಪ್ರತಿದಿನ ಬೆಳಿಗ್ಗೆ ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸಿ, ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಪಡೆಯಿರಿ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.