ಕರಾವಳಿಯಲ್ಲಿ ಶಾಂತಿ ನೆಲೆಸಿದೆ: ಸಚಿವ ಪ್ರಿಯಾಂಕ್ ಖರ್ಗೆ ವಿವಾದಕ್ಕೆ ತೆರೆ ಎಳೆದ ಪರಮೇಶ್ವರ್

Date:

spot_img
Parameshwara11

ಮಂಗಳೂರು : ಕರಾವಳಿಯಲ್ಲಿ ಕೋಮು ಘಟನೆಗಳಿಂದಾಗಿ ಹೂಡಿಕೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಯಿಂದ ಉಂಟಾಗಿದ್ದ ರಾಜಕೀಯ ಸಂಚಲನಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ತಣ್ಣೀರೆರಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಸುಧಾರಿಸಿದ್ದು, ಅಭಿವೃದ್ಧಿಗೆ ಪೂರಕ ವಾತಾವರಣ ಮರಳಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಿಯಾಂಕ್ ಖರ್ಗೆ ಅವರು ಸಾಮಾನ್ಯ ಅರ್ಥದಲ್ಲಿ ಮಾತನಾಡಿದ್ದಾರೆ. ಆದರೆ ವಾಸ್ತವವಾಗಿ ಪೊಲೀಸ್ ಇಲಾಖೆಯ ಅಂಕಿಅಂಶಗಳ ಪ್ರಕಾರ ದ್ವೇಷದ ಅಪರಾಧಗಳು ಮತ್ತು ಮಾದಕ ದ್ರವ್ಯ ಜಾಲದ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ ಎಂದು ಸ್ಪಷ್ಟಪಡಿಸಿದರು. “ಹಿಂದೆ ಅಶಾಂತಿಯ ವಾತಾವರಣ ಇತ್ತು ಎಂಬುದು ನಿಜ, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಗೃಹ ಸಚಿವನಾಗಿ ನಾನು ಇದನ್ನು ಅಧಿಕೃತವಾಗಿ ಹೇಳುತ್ತಿದ್ದೇನೆ. ಕರಾವಳಿಯಲ್ಲಿ ಈಗ ಶಾಂತಿ ನೆಲೆಸುತ್ತಿರುವುದು ನನಗೆ ತೃಪ್ತಿ ತಂದಿದೆ” ಎಂದು ಅವರು ಹೇಳಿದರು.

ಪೋಷಕರು ತಮ್ಮ ಮಕ್ಕಳನ್ನು ಸುರಕ್ಷತೆಯ ದೃಷ್ಟಿಯಿಂದ ಮೈಸೂರು ಅಥವಾ ಬೆಂಗಳೂರಿಗೆ ಕಳುಹಿಸುತ್ತಿದ್ದ ಕಾಲ ಈಗ ದೂರವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ಹಲ್ಲೆಗಳು ಅಥವಾ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ನಿಯಂತ್ರಣಕ್ಕೆ ಬಂದಿವೆ. ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಬದಲಾವಣೆ ಸಾಧ್ಯವಾಗಿದೆ ಎಂದ ಅವರು, ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತೆಸೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಜಾಗೃತಿ ಮೂಡಿಸುವಂತೆ ಮತ್ತು ಎಲ್ಲಾ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿರುವುದಾಗಿ ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.