ಶಿವ ದರ್ಶನದ ಬೆನ್ನಲ್ಲೇ ಸಂಭವಿಸಿದ ದುರಂತ: ಮುಕ್ತಿ ನೀಡಿದ ಮಹಾಬಲೇಶ್ವರ?

Date:

spot_img

ಗೋಕರ್ಣ: ಪುರಾಣ ಪ್ರಸಿದ್ಧವಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕ್ಷೇತ್ರದಲ್ಲಿ ಶಿವರಾತ್ರಿಯ ಸಂಭ್ರಮದ ನಡುವೆಯೇ ಕರುಣಾಜನಕ ಘಟನೆಯೊಂದು ಜರುಗಿದೆ. ವರ್ಷಕ್ಕೊಮ್ಮೆ ದೊರೆಯುವ ಮಹಾಬಲೇಶ್ವರನ ಆತ್ಮಲಿಂಗ ದರ್ಶನವನ್ನು ಅತೀವ ಭಕ್ತಿಯಿಂದ ಪಡೆದ ವಯೋವೃದ್ಧ ಭಕ್ತರೊಬ್ಬರು, ದೇವಸ್ಥಾನದ ಆವರಣದಿಂದ ಹೊರಬರುತ್ತಿದ್ದಂತೆಯೇ ಹೃದಯಾಘಾತಕ್ಕೊಳಗಾಗಿ ಶಿವೈಕ್ಯರಾಗಿದ್ದಾರೆ.

ಘಟನೆಯ ವಿವರ:

ಮೃತಪಟ್ಟ ವ್ಯಕ್ತಿಯನ್ನು ಗೋವಾ ಮೂಲದ ರತ್ನಾಕರ (76) ಎಂದು ಗುರುತಿಸಲಾಗಿದೆ. ಮಹಾಶಿವರಾತ್ರಿಯ ಪವಿತ್ರ ದಿನದಂದು ಆತ್ಮಲಿಂಗವನ್ನು ಕಣ್ಣಾರೆ ಕಂಡು ಪುನೀತರಾಗಬೇಕೆಂಬ ಹಂಬಲದಿಂದ ಇವರು ಗೋಕರ್ಣಕ್ಕೆ ಆಗಮಿಸಿದ್ದರು. ಭಕ್ತಾದಿಗಳ ಅಪಾರ ಸಡಗರದ ನಡುವೆ ಸರತಿಯ ಸಾಲಿನಲ್ಲಿ ನಿಂತು ಆತ್ಮಲಿಂಗದ ದರ್ಶನ ಪಡೆದು, ದೇವಸ್ಥಾನದ ಹೊರಗೆ ಹೆಜ್ಜೆ ಇರಿಸುತ್ತಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಪೊಲೀಸರ ಸಮಯಪ್ರಜ್ಞೆ ಮತ್ತು ವೈದ್ಯರ ಪ್ರಯತ್ನ:

ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅವರನ್ನು ಪೊಲೀಸ್ ವಾಹನದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರತ್ನಾಕರ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಮೃತ ರತ್ನಾಕರ ಅವರಿಗೆ ಈ ಹಿಂದೆ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ.

ಶಿವನ ದರ್ಶನ ಪಡೆದ ಕೆಲವೇ ಕ್ಷಣಗಳಲ್ಲಿ ಪ್ರಾಣಪಕ್ಷಿ ಹಾರಿಹೋಗಿರುವುದು ಸ್ಥಳೀಯರು ಮತ್ತು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. “ಶಿವನ ಪವಿತ್ರ ದಿನದಂದು ಆತನ ಸನ್ನಿಧಿಯಲ್ಲೇ ಸಾವನ್ನಪ್ಪಿರುವುದು ಅವರಿಗೆ ಮೋಕ್ಷ ದೊರೆತಂತಾಗಿದೆ” ಎಂದು ಅಲ್ಲಿದ್ದ ಭಕ್ತರು ಭಾವುಕರಾಗಿ ನುಡಿದಿದ್ದಾರೆ. ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ