spot_img

ಚಿನ್ನದ ದರ ಇತಿಹಾಸದ ಗರಿಷ್ಠ ಮಟ್ಟಕ್ಕೆ: ದೆಹಲಿಯಲ್ಲಿ 10 ಗ್ರಾಂ ಚಿನ್ನ ₹99,800, ಬೆಳ್ಳಿಯೂ ಏರಿಕೆ

Date:

ನವದೆಹಲಿ: ದೇಶದ ಚಿನ್ನ ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸೋಮವಾರ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಚಿನ್ನದ ಬೇಡಿಕೆ ಹೆಚ್ಚಿದಂತೆ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿ ಘೋಷಣೆಯ ಪರಿಣಾಮವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯೂ ಪ್ರಭಾವಿತವಾಗಿದೆ.

ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ದರ ಒಂದೇ ದಿನದಲ್ಲಿ ₹1,650ರಷ್ಟು ಏರಿಕೆಯಾಗಿ ₹99,800ಕ್ಕೆ ತಲುಪಿದ್ದು, 1 ಲಕ್ಷದ ಗಡಿಗೆ ಕೇವಲ ₹200 ಬಾಕಿಯಿದೆ. ಇದು ಚಿನ್ನದ ದರ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ. ಈ ವರ್ಷ ಆರಂಭದಿಂದ ಇಂದಿನವರೆಗೆ ಕೇವಲ ನಾಲ್ಕು ತಿಂಗಳಲ್ಲಿ ಚಿನ್ನದ ದರ ₹20,850ರಷ್ಟು ಏರಿಕೆಯಾಗಿದೆ.

ಬೆಂಗಳೂರು ಮಾರುಕಟ್ಟೆಯಲ್ಲೂ ದರ ಏರಿಕೆ:
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಚಿನ್ನದ ಬೆಲೆ ಜಿಗಿತ ಕಂಡಿದೆ. ಇಲ್ಲಿಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ದರ ₹770 ಏರಿಕೆಯಾಗಿದ್ದು, ₹97,580ರಿಂದ ₹98,350ಕ್ಕೆ ತಲುಪಿದೆ.

ಬೆಳ್ಳಿಯ ದರದಲ್ಲಿ ಕೂಡ ಏರಿಕೆ:
ಅಷ್ಟೆ ಅಲ್ಲ, ಬಹು ದಿನಗಳ ನಂತರ ಬೆಳ್ಳಿಯ ದರದಲ್ಲಿಯೂ ಏರಿಕೆ ಕಂಡುಬಂದಿದೆ. ಒಂದು ಕಿಲೋಗ್ರಾಂ ಬೆಳ್ಳಿಯ ದರ ₹1 ಲಕ್ಷದಿಂದ ₹1,01,000ಕ್ಕೆ ಏರಿಕೆಯಾಗಿದ್ದು, ಬೆಳ್ಳಿ ಹೂಡಿಕೆದಾರರಿಗೆ ತಾತ್ಕಾಲಿಕ ಲಾಭವಾಯಿತೆಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಗ್ರಾಹಕರಲ್ಲಿ ಆತಂಕ:
ಚಿನ್ನದ ದರಗಳಲ್ಲಿ ಇಂತಹ ಭಾರೀ ಏರಿಕೆ ಮದುವೆ ಮತ್ತು ಹಬ್ಬದ ಋತುಗಳಲ್ಲಿ ಚಿನ್ನದ ಖರೀದಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಚಿನ್ನಾಭರಣ ಖರೀದಿಗೆ ಮುಂದಾಗುವ ಗ್ರಾಹಕರು ತಾತ್ಕಾಲಿಕವಾಗಿ ಖರೀದಿ ಮುಂದೂಡುವ ಸೂಚನೆಗಳು ಮಾರುಕಟ್ಟೆಯಲ್ಲಿ ಕಂಡುಬರುತ್ತಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ: ಅನುಮಾನಾಸ್ಪದ ಸಾವು!

ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.

ಪೇಜಾವರ ಶ್ರೀಗಳಿಗೆ ಸನಾತನ ರತ್ನ ಬಿರುದು ಸಹಿತ ಸಂಮಾನ

ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ‌.

ನ್ಯಾಯಮೂರ್ತಿಗಳ ವರ್ಗಾವಣೆ: ಕರ್ನಾಟಕ ಹೈಕೋರ್ಟ್‌ನ ನಾಲ್ವರು ಮತ್ತಿತರ ರಾಜ್ಯಗಳಿಗೆ ಬದಲಾವಣೆ

ಸುಪ್ರೀಂ ಕೋರ್ಟ್‌ ಶಿಫಾರಸಿನಂತೆ, ಹೈಕೋರ್ಟ್‌ಗಳ ಆಡಳಿತಾತ್ಮಕ ಗುಣಮಟ್ಟವನ್ನು ಹೆಚ್ಚಿಸಲು ದೇಶದ ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ವರ್ಗಾಯಿಸಲಾಗಿದೆ.