spot_img

ನೆಲಮಂಗಲದಲ್ಲಿ ಪ್ಲಾಸ್ಟಿಕ್ ಗನ್‌ನಿಂದ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳು ಬಂಧನ

Date:

ನೆಲಮಂಗಲ : ಪ್ಲಾಸ್ಟಿಕ್ ಗನ್ ಹಿಡಿದು ಬೆಂಗಳೂರಿನ ಹೊರವಲಯದಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಬಂಧಿಸುವಲ್ಲಿ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಗ್ಯಾಂಗ್ 50ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬಯಲಾಗಿದೆ.

ಬಂಧಿತರನ್ನು ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್ ಮತ್ತು ರಂಶಾದ್ ಎಂದು ಗುರುತಿಸಲಾಗಿದೆ. ಈ ಮೂವರು ಉಡುಪಿ, ಒಡಿಶಾ ಮತ್ತು ಮಂಗಳೂರು ಮೂಲದವರಾಗಿದ್ದು, ರಾಜ್ಯದಾದ್ಯಂತ ಕಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದರು.

ಪ್ರಕರಣದ ವಿವರ: ಕಳೆದ ಜೂನ್ 25 ರಂದು ಮಾದನಾಯಕನಹಳ್ಳಿಯ ಮಾಚೋಹಳ್ಳಿ ಗೇಟ್ ಸಮೀಪದ ಜ್ಯುವೆಲರಿ ಶಾಪ್ ಒಂದಕ್ಕೆ ಈ ಗ್ಯಾಂಗ್ ನುಗ್ಗಿತ್ತು. ಪ್ಲಾಸ್ಟಿಕ್ ಗನ್ ತೋರಿಸಿ ಅಂಗಡಿ ಮಾಲೀಕರಿಗೆ ಬೆದರಿಸಿ, ಸುಮಾರು 90 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ದರೋಡೆಯಾದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ನಡೆಸಿ ದರೋಡೆಕೋರರ ಜಾಡು ಹಿಡಿದು ಬಂಧಿಸಿದ್ದಾರೆ. ಬಂಧಿತರಿಂದ ದರೋಡೆ ಮಾಡಿದ 90 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ 2 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಮತ್ತು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಮಾಡಿರುವ ಅಪರಾಧಗಳ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.