ನೆಲಮಂಗಲದಲ್ಲಿ ಪ್ಲಾಸ್ಟಿಕ್ ಗನ್‌ನಿಂದ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳು ಬಂಧನ

Date:

spot_img

ನೆಲಮಂಗಲ : ಪ್ಲಾಸ್ಟಿಕ್ ಗನ್ ಹಿಡಿದು ಬೆಂಗಳೂರಿನ ಹೊರವಲಯದಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಬಂಧಿಸುವಲ್ಲಿ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಗ್ಯಾಂಗ್ 50ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬಯಲಾಗಿದೆ.

ಬಂಧಿತರನ್ನು ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್ ಮತ್ತು ರಂಶಾದ್ ಎಂದು ಗುರುತಿಸಲಾಗಿದೆ. ಈ ಮೂವರು ಉಡುಪಿ, ಒಡಿಶಾ ಮತ್ತು ಮಂಗಳೂರು ಮೂಲದವರಾಗಿದ್ದು, ರಾಜ್ಯದಾದ್ಯಂತ ಕಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದರು.

ಪ್ರಕರಣದ ವಿವರ: ಕಳೆದ ಜೂನ್ 25 ರಂದು ಮಾದನಾಯಕನಹಳ್ಳಿಯ ಮಾಚೋಹಳ್ಳಿ ಗೇಟ್ ಸಮೀಪದ ಜ್ಯುವೆಲರಿ ಶಾಪ್ ಒಂದಕ್ಕೆ ಈ ಗ್ಯಾಂಗ್ ನುಗ್ಗಿತ್ತು. ಪ್ಲಾಸ್ಟಿಕ್ ಗನ್ ತೋರಿಸಿ ಅಂಗಡಿ ಮಾಲೀಕರಿಗೆ ಬೆದರಿಸಿ, ಸುಮಾರು 90 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ದರೋಡೆಯಾದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ನಡೆಸಿ ದರೋಡೆಕೋರರ ಜಾಡು ಹಿಡಿದು ಬಂಧಿಸಿದ್ದಾರೆ. ಬಂಧಿತರಿಂದ ದರೋಡೆ ಮಾಡಿದ 90 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ 2 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಮತ್ತು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಮಾಡಿರುವ ಅಪರಾಧಗಳ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.