spot_img

ಹೆಬ್ರಿಯಲ್ಲಿ ಸುವರ್ಣ ಸಂಭ್ರಮದ ಗಣೇಶೋತ್ಸವ: ಮುಕ್ತ ಕ್ರಿಕೆಟ್ ಪಂದ್ಯಾಟ ಯಶಸ್ವಿ

Date:

spot_img

ಹೆಬ್ರಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ), ಹೆಬ್ರಿ, ಇದರ ಸುವರ್ಣ ಸಂಭ್ರಮದ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಮುಕ್ತ ಅಂಡರ್-ಆರ್ಮ್ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಸಮಿತಿಯ ಉಪಾಧ್ಯಕ್ಷ ಮತ್ತು ಹಿರಿಯರಾದ ಹೆಚ್. ಪ್ರಕಾಶ್ ಮಲ್ಯ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ವಿವರಗಳು:

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಎಚ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡಾ ಸಂಚಾಲಕರಾದ ಕರುಣಾಕರ ಸೇರಿಗಾರ್, ಉಪಾಧ್ಯಕ್ಷ ದಿವಾಕರ ಶೆಟ್ಟಿ ಸೀತಾನದಿ, ಕ್ರಿಕೆಟ್ ಬಹುಮಾನದ ಪ್ರಾಯೋಜಕತ್ವವನ್ನು ನೀಡಿದ ಶ್ರೀ ಅಶೋಕ್ ಹೆಗ್ಡೆ ಶ್ರೀ ಪೊಳಲಿ, ಹಾಗೂ ಸಮಿತಿಯ ಸಂಚಾಲಕರುಗಳಾದ ಸಂತೋಷ್ ನಾಯಕ್, ವಸಂತ ವಿ.ಎಸ್.ಎಸ್, ನರೇಂದ್ರ ನಾಯಕ್, ನಾಗರಾಜ್ ಬಿ. ಶೆಟ್ಟಿ, ನಿತೀಶ್ ಎಸ್.ಪಿ, ಸಂತೋಷ್ ಕುಮಾರ್, ಸತೀಶ್ ನಾಯ್ಕ್, ಸುದೀಪ್ ಭಟ್, ಸುದೀಪ್ ಸೇರಿಗಾರ್, ಪ್ರಸನ್ನ ಸೇರಿಗಾರ್, ವಿದ್ಯಾ ಮಲ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪಂದ್ಯಾಟದ ಫಲಿತಾಂಶ:

ಒಟ್ಟು 23 ತಂಡಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ, ‘ಹೆಬ್ರಿ ಕ್ರಿಕೆಟರ್ಸ್’ ತಂಡವು ವಿಜೇತ ಪ್ರಶಸ್ತಿಯನ್ನು ಬಾಚಿಕೊಂಡಿತು. ‘ಭದ್ರಕಾಳಿ ಫ್ರೆಂಡ್ಸ್ ಮುದ್ರಾಡಿ’ ತಂಡವು ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಯಿತು. ಸಮಿತಿಯ ಸಂಚಾಲಕ ಪ್ರಸಾದ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕೋರ್ಟ್ ತೀರ್ಪಿಗೆ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.