spot_img

ಬಿಗ್ ಬಾಸ್ ಖ್ಯಾತಿ ಶೈನ್ ಶೆಟ್ಟಿಗೆ ಬದುಕು ನೀಡಿದ ‘ಗಲ್ಲಿ ಕಿಚನ್’ಗೆ ಗುಡ್ ಬೈ

Date:

spot_img

ಬಿಗ್ ಬಾಸ್ ಕನ್ನಡ ಸೀಸನ್ 7ನಲ್ಲಿ ಗಮನ ಸೆಳೆದ ನಟ ಶೈನ್ ಶೆಟ್ಟಿ, ತಮ್ಮ ಹೃದಯದ ಹತ್ತಿರದ “ಗಲ್ಲಿ ಕಿಚನ್” ರೆಸ್ಟೋರೆಂಟ್‌ನ್ನು ಮುಚ್ಚಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಭಾವನಾತ್ಮಕವಾಗಿ ಬರೆದ ಪತ್ರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

“ನನ್ನ ಅಸ್ತಿತ್ವ ಮತ್ತು ವ್ಯಕ್ತಿತ್ವಕ್ಕೆ ಶಕ್ತಿ ನೀಡಿದ ಪ್ರಯಾಣವೊಂದು — ‘ಗಲ್ಲಿ ಕಿಚನ್’! ಪುಟ್ಟ ದೋಸೆ ಕ್ಯಾಂಪ್ ಆಗಿ ಆರಂಭವಾಗಿ ಜನಪ್ರಿಯ ರೆಸ್ಟೋರೆಂಟ್ ಆಗಿ ಬೆಳೆದ ಈ ಕನಸು ಈಗ ಮುಗಿಯುತ್ತಿದೆ,” ಎಂದು ಶೈನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

‘ಲಕ್ಷ್ಮಿ ಬಾರಮ್ಮ’ ಸೀರಿಯಲ್ ನಂತರದ ಹಿನ್ನಡೆಗೆ ಬೆಂಬಲವಾಗಿ ಆರಂಭಿಸಿದ ‘ಗಲ್ಲಿ ಕಿಚನ್’ ಫುಡ್ ಟ್ರಕ್, ಹಲವು ಜನರ ಮೆಚ್ಚುಗೆ ಗಳಿಸಿ ಎರಡು ಶಾಖೆಗಳ ಹೋಟೆಲ್ ಆಗಿತ್ತು. ಆದರೆ ಈಗ ಅವರು ಈ ಪ್ರಯಾಣಕ್ಕೆ “ಗುಡ್ ಬೈ” ಹೇಳಿದ್ದಾರೆ.

ಭಾವಪೂರ್ಣವಾಗಿ “ನಾನು ನಿಮ್ಮ ಪ್ರೀತಿಗೆ ಸದಾ ಋಣಿ” ಎಂದು ಹೇಳಿದ ಶೈನ್ , ಮುಂದಿನ ಹಾದಿಯಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದೇನೆ ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ