spot_img

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

Date:

spot_img
spot_img

ಹೊಸದಿಲ್ಲಿ: ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ, ಭಾರತದಲ್ಲಿ ಕಂಪನಿಯ ಇದುವರೆಗಿನ ಅತಿದೊಡ್ಡ ಹೂಡಿಕೆಯಾದ $15 ಬಿಲಿಯನ್ ಮೊತ್ತದ ಬೃಹತ್ ಯೋಜನೆಗಳ ಬಗ್ಗೆ ಪಿಚೈ ಮಾಹಿತಿ ನೀಡಿದರು.

ವಿಶಾಖಪಟ್ಟಣಂನಲ್ಲಿ ತನ್ನ ಕೃತಕ ಬುದ್ಧಿಮತ್ತೆ ಕೇಂದ್ರಕ್ಕಾಗಿ ಅಮೆರಿಕದ ತಂತ್ರಜ್ಞಾನ ದೈತ್ಯ ಕಂಪನಿಯ ಯೋಜನೆಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಂಡಿರುವುದಾಗಿ ಪಿಚೈ ತಿಳಿಸಿದರು.

ಅಮೆರಿಕ ಹೊರಗಿನ ಅತಿದೊಡ್ಡ AI ಕೇಂದ್ರ

ಗೂಗಲ್ ಕಂಪನಿಯು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ತನ್ನ ಮೊದಲ AI ಹಬ್‌ ಸ್ಥಾಪಿಸಲು ಮುಂದಾಗಿದ್ದು, ಇದು ಅಮೆರಿಕದ ಹೊರಗಿನ ಕಂಪನಿಯ ಅತಿದೊಡ್ಡ AI ಕೇಂದ್ರ ಆಗಲಿದೆ. ಇದಕ್ಕಾಗಿ ಗೂಗಲ್, ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ $15 ಬಿಲಿಯನ್ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಈ ಮಹತ್ವಾಕಾಂಕ್ಷೆಯ AI ಹಬ್‌ಗೆ ಗೂಗಲ್, ಅದಾನಿ ಗ್ರೂಪ್ ಜೊತೆಗೆ ಪಾಲುದಾರಿಕೆ ಮಾಡಿಕೊಂಡಿದೆ. ಇದನ್ನು “ಹೆಗ್ಗುರುತು” ಬೆಳವಣಿಗೆ ಎಂದು ಕರೆದ ಭಾರತೀಯ ಮೂಲದ ಸಿಇಒ ಸುಂದರ್ ಪಿಚೈ, ಈ ಕೇಂದ್ರವು ಗಿಗಾವ್ಯಾಟ್-ಪ್ರಮಾಣದ ಕಂಪ್ಯೂಟ್ ಸಾಮರ್ಥ್ಯ, ಹೊಸ ಅಂತಾರಾಷ್ಟ್ರೀಯ ಸಬ್‌ಸೀ ಗೇಟ್‌ವೇ ಮತ್ತು ದೊಡ್ಡ ಪ್ರಮಾಣದ ಇಂಧನ ಮೂಲಸೌಕರ್ಯವನ್ನು ಸಂಯೋಜಿಸುತ್ತದೆ ಎಂದು ತಿಳಿಸಿದರು.

“ಕ್ರಿಯಾತ್ಮಕ ನಗರವಾದ ವಿಶಾಖಪಟ್ಟಣದಲ್ಲಿ ಗೂಗಲ್ ಎಐ ಹಬ್ ಆರಂಭವಾಗುತ್ತಿರುವುದರಿಂದ ಸಂತೋಷಗೊಂಡಿದ್ದೇನೆ. ಈ ಹೂಡಿಕೆ ಭಾರತದ ‘ವಿಕಸಿತ ಭಾರತ’ದ ದೂರದೃಷ್ಟಿಗೆ ಅನುಗುಣವಾಗಿದೆ,” ಎಂದು ಪ್ರಧಾನಿ ಮೋದಿ ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಹೃದಯಾಘಾತದಿಂದ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ

ನೆಟ್‌ವರ್ಕ್ 18 ಸಂಸ್ಥೆಯ ಕನ್ನಡ ಯೂಟ್ಯೂಬ್ ವಿಭಾಗದ ಮುಖ್ಯಸ್ಥರಾಗಿದ್ದ ಯುವ ಪತ್ರಕರ್ತ ಶ್ರೇಯಸ್ ಆರ್ (41) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.